ADVERTISEMENT

ದಲಿತ ಮುಖ್ಯಮಂತ್ರಿ ವಿಚಾರ ಈಗ ಅಪ್ರಸ್ತುತ: ಡಾ.ಜಿ.ಪರಮೇಶ್ವರ್‌

ಕೆಪಿಸಿಸಿ ಚುನಾವಣಾ ಪ್ರಣಾಳಿಕೆ ಸಮಿತಿಯ ಅಧ್ಯಕ್ಷ ಹಾಗೂ ಐಕ್ಯತಾ ಸಮಿತಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್‌

​ಪ್ರಜಾವಾಣಿ ವಾರ್ತೆ
Published 14 ಡಿಸೆಂಬರ್ 2022, 18:55 IST
Last Updated 14 ಡಿಸೆಂಬರ್ 2022, 18:55 IST
ಡಾ.ಜಿ.ಪರಮೇಶ್ವರ್
ಡಾ.ಜಿ.ಪರಮೇಶ್ವರ್   

ಮೈಸೂರು: ‘ದಲಿತ ಮುಖ್ಯಮಂತ್ರಿ ವಿಚಾರ ಈಗ ಅಪ್ರಸ್ತುತ. ರಾಜ್ಯದಲ್ಲಿ ಪಕ್ಷವನ್ನು ಅಧಿಕಾರಕ್ಕೆ ತರುವುದೇ ಮುಖ್ಯ. ಕಾಂಗ್ರೆಸ್‌ನಲ್ಲಿ ಮಾತ್ರ ದಲಿತರು ಮುಖ್ಯಮಂತ್ರಿಯಾಗಲು ಸಾಧ್ಯ’ ಎಂದು ಕೆಪಿಸಿಸಿ ಚುನಾವಣಾ ಪ್ರಣಾಳಿಕೆ ಸಮಿತಿಯ ಅಧ್ಯಕ್ಷ ಹಾಗೂ ಐಕ್ಯತಾ ಸಮಿತಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್‌ ಪ್ರತಿಪಾದಿಸಿದರು.

‘ರಾಜಕೀಯ ಉದ್ದೇಶಕ್ಕಾಗಿಯೇ ಚಿತ್ರದುರ್ಗದಲ್ಲಿ ಜ.8ರಂದು ಪರಿಶಿಷ್ಟ ಜಾತಿ ಹಾಗೂ ಪಂಗಡದ ಐಕ್ಯತಾ ಸಮಾವೇಶ ನಡೆಸುತ್ತಿದ್ದು, ಆ ಮೂಲಕ ಸಮುದಾಯದ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಡ ಹೇರಲಾಗುವುದು. ಮುಖ್ಯಮಂತ್ರಿ ಹುದ್ದೆಗೆ ವಿಚಾರದಲ್ಲಿ ನಾನೇನು ಸನ್ಯಾಸಿಯಲ್ಲ’ ಎಂದು ಬುಧವಾರ ಮೈಸೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT