ADVERTISEMENT

ನಟ ದರ್ಶನ್‌ ಗಲಾಟೆ ಪ್ರಕರಣ; ತನಿಖೆಗೆ ಗೃಹ ಇಲಾಖೆ ಸೂಚನೆ

​ಪ್ರಜಾವಾಣಿ ವಾರ್ತೆ
Published 15 ಜುಲೈ 2021, 13:13 IST
Last Updated 15 ಜುಲೈ 2021, 13:13 IST
ದರ್ಶನ್‌
ದರ್ಶನ್‌    

ಮೈಸೂರು: ಇಲ್ಲಿನ ‘ಸಂದೇಶ್‌ ದ ಪ್ರಿನ್ಸ್’ ಹೋಟೆಲ್‌ ಸಿಬ್ಬಂದಿ ಮೇಲೆ ನಟ ದರ್ಶನ್‌ ಅವರು ನಡೆಸಿದ್ದಾರೆ ಎನ್ನಲಾದ ದೂರಿನ ಕುರಿತು ತನಿಖೆ ನಡೆಸುವಂತೆ ಗೃಹ ಇಲಾಖೆ ಇಲ್ಲಿನ ಪೊಲೀಸರಿಗೆ ಸೂಚಿಸಿದೆ.

ಈ ಕುರಿತು ‘ಪ್ರಜಾವಾಣಿ’ ನಗರ ಪೊಲೀಸ್ ಕಮಿಷನರ್ ಡಾ.ಚಂದ್ರಗುಪ್ತ ಅವರನ್ನು ಸಂಪರ್ಕಿಸಿದಾಗ ಅವರು, ‘ಇಂದ್ರಜಿತ್ ಲಂಕೇಶ್‌ ನೀಡಿರುವ ದೂರಿನ ಕುರಿತು ಸಮಗ್ರ ತನಿಖೆ ನಡೆಸುವಂತೆ ಗೃಹ ಇಲಾಖೆ ಸೂಚಿಸಿದೆ. ಈ ಕುರಿತು ತನಿಖೆ ಕೈಗೆತ್ತಿಕೊಳ್ಳಲಾಗಿದೆ’ ಎಂದು ತಿಳಿಸಿದರು.

ಘಟನೆ ಕುರಿತು ಹೈಕೋರ್ಟ್ ವಕೀಲರಾದ ಎನ್.ಪಿ.ಅಮೃತೇಶ್ ಸಹ ನಗರ ಪೊಲೀಸ್ ಕಮಿಷನರ್‌ ಅವರಿಗೆ ಮೇಲ್‌ ಮೂಲಕ ದೂರು ನೀಡಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.