ಮೈಸೂರು: ಜಂಬೂ ಸವಾರಿ ಸಾಗುವ ಮಾರ್ಗವಾದ ಸಯ್ಯಾಜಿ ರಾವ್ ರಸ್ತೆಯಲ್ಲಿ ನೂಕುನುಗ್ಗಲು ನಿಯಂತ್ರಿಸಲು ಪೊಲೀಸರು ಹರಸಾಹಸ ಪಟ್ಟರು.
ಚಾಮುಂಡೇಶ್ವರಿ ಚಿತ್ರಮಂದಿರ ಪಕ್ಕ ರಸ್ತೆಗೆ ಹೋಗದಂತೆ ತಡೆಯಲು ನಿರ್ಮಿಸಿದ್ದ ಬ್ಯಾರಿಕೇಡ್ ಹತ್ತಿದ ಜನರು ಜಿಗಿಯಲು ಪ್ರಯತ್ನಿಸಿದರು. ಪೊಲೀಸರು ಜನರನ್ನು ನಿಯಂತ್ರಿಸಲು ಲಘು ಲಾಠಿ ಪ್ರಹಾರ ನಡೆಸಿದರು.
ಮಹಿಳೆಯರನ್ನು ಪುರುಷರ ಗ್ಯಾಲರಿಯಿಂದ ಬೇರ್ಪಡಿಸಿ ಅನುಕೂಲಕರವಾಗಿ ಜಂಬೂ ಸವಾರಿ ವೀಕ್ಷಿಸಲು ಪೊಲೀಸರು ಅನುವು ಮಾಡಿಕೊಟ್ಟರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.