ADVERTISEMENT

ಅರಮನೆ ಆವರಣದಲ್ಲಷ್ಟೇ ನಾಳೆ ಜಂಬೂಸವಾರಿ

​ಪ್ರಜಾವಾಣಿ ವಾರ್ತೆ
Published 24 ಅಕ್ಟೋಬರ್ 2020, 20:07 IST
Last Updated 24 ಅಕ್ಟೋಬರ್ 2020, 20:07 IST
.
.   

ಮೈಸೂರು: ಕೋವಿಡ್‌ ಪರಿಸ್ಥಿತಿಯಿಂದಾಗಿ ಈ ಬಾರಿ ಸಾರ್ವಜನಿಕರಿಗೆ ನಿರ್ಬಂಧ ವಿಧಿಸಿ, ಅರಮನೆ ಆವರಣಕ್ಕೆ ಸೀಮಿತವಾಗಿ ನಡೆಯಲಿರುವ ಮೈಸೂರು ದಸರಾ ಜಂಬೂಸವಾರಿಗೆ ಕ್ಷಣಗಣನೆ ಆರಂಭವಾಗಿದೆ.

ಸೋಮವಾರ ಮಧ್ಯಾಹ್ನ 2.59ರಿಂದ 3.20ಕ್ಕೆ ಸಲ್ಲುವ ಶುಭ ಮಕರ ಲಗ್ನದಲ್ಲಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರು ಅರಮನೆಯ ಬಲರಾಮ ದ್ವಾರದಲ್ಲಿ ನಂದಿಧ್ವಜಕ್ಕೆ ಪೂಜೆ ಸಲ್ಲಿಸಲಿದ್ದಾರೆ. ಬಳಿಕ 3.40ರಿಂದ 4.15ವರೆಗೆ ಸಲ್ಲುವ ಶುಭ ಕುಂಭ ಲಗ್ನದಲ್ಲಿ ಮೆರವಣಿಗೆಗೆ ಚಾಲನೆ ನೀಡಿ, ಅಂಬಾರಿಯಲ್ಲಿ ಪ್ರತಿಷ್ಠಾಪನೆಗೊಳ್ಳಲಿರುವ ನಾಡದೇವತೆ ಚಾಮುಂಡೇಶ್ವರಿ ಉತ್ಸವ ಮೂರ್ತಿಗೆ ಪುಷ್ಪಾರ್ಚನೆ ಮಾಡಲಿದ್ದಾರೆ.

ಕೋವಿಡ್‌ ಕಾರಣ 300 ಮೀಟರ್‌ ಅಂತರದೊಳಗೆ ಮೆರವಣಿಗೆ ನಡೆಯಲಿದ್ದು, 30ರಿಂದ 40 ನಿಮಿಷಗಳಲ್ಲಿ ಕೊನೆಗೊಳ್ಳಲಿದೆ. 300 ಮಂದಿಗೆ ಮಾತ್ರ ಪ್ರವೇಶಾವಕಾಶವಿದೆ.

ADVERTISEMENT

ಜಂಬೂಸವಾರಿಯನ್ನು ‘ಪ್ರಜಾವಾಣಿ’ ಫೇಸ್‌ಬುಕ್ ಲೈವ್‌ನಲ್ಲಿ‌ (Fb.com/Prajavani.net) ವರ್ಚು ವಲ್ ಆಗಿ ವೀಕ್ಷಣೆ ಮಾಡಬಹುದಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.