ADVERTISEMENT

ಕಾಣೆಯಾಗಿದ್ದ ವ್ಯಕ್ತಿಯ ಶವ ಕೆರೆಯಲ್ಲಿ ಪತ್ತೆ

​ಪ್ರಜಾವಾಣಿ ವಾರ್ತೆ
Published 20 ಅಕ್ಟೋಬರ್ 2019, 3:15 IST
Last Updated 20 ಅಕ್ಟೋಬರ್ 2019, 3:15 IST

ಪಿರಿಯಾಪಟ್ಟಣ: ಮೂರು ದಿನಗಳಿಂದ ಕಾಣೆಯಾಗಿದ್ದ ತಾಲ್ಲೂಕಿನ ಬೆಟ್ಟದಪುರ ಗ್ರಾಮದ ಹರೀಶ್ (40) ಎಂಬುವವರು ಗ್ರಾಮದ ತಾವರೆಕೆರೆಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ.

ಹರೀಶ್ ಅ. 16ರ ಬೆಳಿಗ್ಗೆ ಎಂದಿನಂತೆ ಬಯಲು ಶೌಚಾಲಯಕ್ಕೆಂದು ಹೋಗಿದ್ದು, ಮನೆಗೆ ಬಾರದೆ ಇದ್ದಾಗ ಮೃತರ ಪತ್ನಿ ತುಳಸಿ ಹಾಗೂ ಕುಟುಂಬದವರು ಸಂಬಂಧಿಕರ ಮನೆಯಲ್ಲಿ ಹಾಗೂ ಅಕ್ಕಪಕ್ಕದ ಗ್ರಾಮಗಳಲ್ಲಿ ಹುಡುಕಾಡಿದ್ದಾರೆ. ಹರೀಶ್ ಪತ್ತೆಯಾಗದ ಕಾರಣ ಪತ್ನಿ ತುಳಸಿ ಬೆಟ್ಟದಪುರ ಪೊಲೀಸ್ ಠಾಣೆಗೆ ದೂರು ನೀಡಿದ್ದರು.

ಶುಕ್ರವಾರ ಕೆರೆಯಲ್ಲಿ ಶವ ಪತ್ತೆಯಾಗಿದ್ದು, ಪೊಲೀಸರು ಆತ್ಮಹತ್ಯೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ಧಾರೆ. ಮೃತರಿಗೆ ಪತ್ನಿ ತುಳಸಿ, ಇಬ್ಬರು ಮಕ್ಕಳು ಇದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.