ADVERTISEMENT

ಮೈಸೂರು: ಗಣರಾಜ್ಯೋತ್ಸವ ಶಿಬಿರಕ್ಕೆ ದಿಯಾ ಆಯ್ಕೆ

​ಪ್ರಜಾವಾಣಿ ವಾರ್ತೆ
Published 23 ಡಿಸೆಂಬರ್ 2022, 10:10 IST
Last Updated 23 ಡಿಸೆಂಬರ್ 2022, 10:10 IST
ದಿಯಾ ಗಣೇಶ್
ದಿಯಾ ಗಣೇಶ್   

ಮೈಸೂರು: ದೆಹಲಿಯಲ್ಲಿ ನಡೆಯಲಿರುವ ಗಣರಾಜ್ಯೋತ್ಸವ ಶಿಬಿರ–2023ಕ್ಕೆ ಮೈಸೂರಿನ ಕುಮಾರಬೀಡು ಆರ್ಕಿಡ್ಸ್ ಪಬ್ಲಿಕ್ ಶಾಲೆಯ 9ನೇ ತರಗತಿ ವಿದ್ಯಾರ್ಥಿನಿ ದಿಯಾ ಗಣೇಶ್ ಆಯ್ಕೆಯಾಗಿದ್ದಾರೆ.

ಕರ್ನಾಟಕ ಮತ್ತು ಗೋವಾ ನಿರ್ದೇಶನಾಲಯದ ಜೂನಿಯರ್ ವಿಭಾಗದಿಂದ ಆಯ್ಕೆಯಾದ ಏಕೈಕ ಕೆಡೆಟ್ ಇವರಾಗಿದ್ದಾರೆ. ಕಳೆದ ವರ್ಷ 14–ಕರ್ನಾಟಕ ಬೆಟಾಲಿಯನ್ ಅಡಿಯಲ್ಲಿ ಆರ್ಕಿಡ್ಸ್ ಪಬ್ಲಿಕ್ ಸ್ಕೂಲ್‌ನಲ್ಲಿ ಎನ್‌ಸಿಸಿ ಪ್ರಾರಂಭವಾಯಿತು. 50 ಕೆಡೆಟ್‌ಗಳಿಗೆ ಜೂನಿಯರ್ ವಿಭಾಗ (ಜೆಡಿ) ಜೂನಿಯರ್ ವಿಂಗ್ (ಜೆಡಬ್ಲ್ಯೂ)ನಲ್ಲಿ ತರಬೇತಿ ನೀಡಲಾಗುತ್ತಿದೆ. 8 ಮತ್ತು 9ನೇ ತರಗತಿಯ ವಿದ್ಯಾರ್ಥಿಗಳಿಗೆ ಎನ್‌ಸಿಸಿಯನ್ನು ಪರಿಚಯಿಸಿದೆ.

ಸವಿ ಗಣೇಶ್–ಗಣೇಶ್ ಮಾದಪ್ಪ ದಂಪತಿಯ ಪುತ್ರಿಯಾದ ದಿಯಾ ಅಂತಿಮ ಗಣರಾಜ್ಯೋತ್ಸವ ಶಿಬಿರಕ್ಕೆ ಆಯ್ಕೆಯಾಗುವ ಮುನ್ನ ಮೈಸೂರು ಮತ್ತು ಬೆಂಗಳೂರಿನಲ್ಲಿ 7 ವಿವಿಧ ಶಿಬಿರಗಳಲ್ಲಿ ಭಾಗವಹಿಸಿದ್ದಾರೆ. ಅವರನ್ನು ಆರ್ಕಿಡ್ಸ್ ಪಬ್ಲಿಕ್ ಶಾಲೆಯ ಆಡಳಿತ ಮಂಡಳಿ, ಪ್ರಾಂಶುಪಾಲರು, ಸಿಬ್ಬಂದಿ ಮತ್ತು ವಿದ್ಯಾರ್ಥಿಗಳು ಅಭಿನಂದಿಸಿದ್ದಾರೆ.

ADVERTISEMENT

Lok Sabha Elections Results 2024 |ನರೇಂದ್ರ ಮೋದಿ ಅವರ 'ವಿಕಸಿತ ಭಾರತ' ಅಥವಾ ರಾಹುಲ್ ಗಾಂಧಿ ಅವರ ಇಂಡಿಯಾ ಐಕ್ಯ ಭಾರತ? ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವದ 18ನೇ ಲೋಕಸಭೆಗೆ ನಡೆದ ಚುನಾವಣೆ ಫಲಿತಾಂಶದ ಕ್ಷಣ ಕ್ಷಣದ ಮಾಹಿತಿ, ವಿಶ್ವಾಸಾರ್ಹ ವಿಶ್ಲೇಷಣೆ, ಅಂಕಿ ಅಂಶಗಳಿಗಾಗಿ ಪ್ರಜಾವಾಣಿ ನೋಡಿ. ಇದರ ಜೊತಗೆ, ಆಂಧ್ರಪ್ರದೇಶ ಮತ್ತು ಒಡಿಶಾ ವಿಧಾನಸಭೆ ಚುನಾವಣೆಯ ಫಲಿತಾಂಶವೂ ಇಲ್ಲೇ ಲಭ್ಯ. ಪ್ರಜಾವಾಣಿಯನ್ನು ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಫಾಲೋ ಮಾಡಲು ಮರೆಯದಿರಿ.