ADVERTISEMENT

ಎನ್‌ಕೌಂಟರ್‌ ಮಾಡಬೇಡಿ: ಮೈಸೂರು ಅತ್ಯಾಚಾರ ಪ್ರಕರಣದ ಆರೋಪಿಗಳ ಪೋಷಕರ ಮನವಿ

ಆರೋಪಿಗಳನ್ನು ತಮಿಳುನಾಡಿಗೆ ಕರೆದೊಯ್ದ ಪೊಲೀಸರು

​ಪ್ರಜಾವಾಣಿ ವಾರ್ತೆ
Published 3 ಸೆಪ್ಟೆಂಬರ್ 2021, 5:10 IST
Last Updated 3 ಸೆಪ್ಟೆಂಬರ್ 2021, 5:10 IST
ಸ್ಥಳ ಮಹಜರು ಕಾರ್ಯದಲ್ಲಿ ಸಾಮೂಹಿಕ ಅತ್ಯಾಚಾರ ನಡೆದ ಸ್ಥಳವನ್ನು ತೋರಿಸಿದ ಆರೋಪಿ
ಸ್ಥಳ ಮಹಜರು ಕಾರ್ಯದಲ್ಲಿ ಸಾಮೂಹಿಕ ಅತ್ಯಾಚಾರ ನಡೆದ ಸ್ಥಳವನ್ನು ತೋರಿಸಿದ ಆರೋಪಿ   

ಮೈಸೂರು: ‘ಸಾಮೂಹಿಕ ಅತ್ಯಾಚಾರ ‍ಪ್ರಕರಣದಲ್ಲಿ ಬಂಧಿತರಾದ ನಮ್ಮವ ರನ್ನು ಎನ್‌ಕೌಂಟರ್‌ ಮಾಡಬೇಡಿ’ ಎಂದು ಆರೋಪಿಗಳ ಪೋಷಕರು ಪೊಲೀಸರಲ್ಲಿ ಮನವಿ
ಮಾಡಿದ್ದಾರೆ.

ಕೃತ್ಯ ನಡೆಸಿದ ದಿನ ತೊಟ್ಟಿದ್ದ ಬಟ್ಟೆ ಹಾಗೂ ಹಲ್ಲೆಗೆ ಬಳಸಿದ್ದ ಮಾರಕಾಸ್ತ್ರಗಳನ್ನು ವಶಕ್ಕೆ ಪಡೆಯಲು ಪೊಲೀಸರು ತಮಿಳುನಾಡಿನಲ್ಲಿರುವ ಆರೋಪಿಗಳ ಮನೆಗಳಿಗೆ ತೆರಳಿದಾಗ ಪೋಷಕರು ಕಣ್ಣೀರಿಡುತ್ತಾ ಕೈ ಮುಗಿದಿದ್ದಾರೆ.

ADVERTISEMENT

‘ಕರ್ನಾಟಕ ಪೊಲೀಸರು ಆರೋಪಿಗಳನ್ನು ಎನ್‌ಕೌಂಟರ್‌ ಮಾಡುತ್ತಾರೆ’ ಎಂಬ ಸುದ್ದಿ ಸತ್ಯಮಂಗಲ, ಈರೋಡ್‌, ತಾಳವಾಡಿ ಸೇರಿದಂತೆ ಸುತ್ತಮುತ್ತಲ ಪ್ರದೇಶಗಳಲ್ಲಿ ವ್ಯಾಪಕವಾಗಿ ಹಬ್ಬಿದೆ.

ಸ್ಥಳೀಯ ಮಾಧ್ಯಮಗಳೂ ಆರೋಪಿಗಳನ್ನು ಎನ್‌ಕೌಂಟರ್‌ ಮಾಡುವಂತೆ ಕರ್ನಾಟಕದ ರಾಜಕಾರಣಿಗಳು ನೀಡಿದ ಹೇಳಿಕೆಯನ್ನು ಪ್ರಧಾನವಾಗಿ ಬಿತ್ತರಿಸಿ, ಎನ್‌ಕೌಂಟರ್‌ ಮಾಡುವ ಸಾಧ್ಯತೆ ಕುರಿತು ಹೆಚ್ಚು ಚರ್ಚೆ ನಡೆಸಿವೆ. ಹೀಗಾಗಿ ಪೊಲೀಸರು ಎನ್‌ಕೌಂಟರ್‌ ಮಾಡಿಬಿಡಬಹುದು ಎಂಬ ಭೀತಿ ಪೋಷಕರಲ್ಲಿದೆ.

ಇವುಗಳನ್ನೂ ಓದಿ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.