ADVERTISEMENT

ಜಯದೇವ ಆಸ್ಪತ್ರೆ ನಿರ್ದೇಶಕ ಡಾ. ಸಿ.ಎನ್. ಮಂಜುನಾಥ್ ಅವರಿಂದ ದಸರಾ ಉದ್ಘಾಟನೆ

​ಪ್ರಜಾವಾಣಿ ವಾರ್ತೆ
Published 10 ಅಕ್ಟೋಬರ್ 2020, 6:35 IST
Last Updated 10 ಅಕ್ಟೋಬರ್ 2020, 6:35 IST
ಜಯದೇವ ಆಸ್ಪತ್ರೆ ನಿರ್ದೇಶಕ ಡಾ. ಸಿ.ಎನ್.ಮಂಜುನಾಥ್
ಜಯದೇವ ಆಸ್ಪತ್ರೆ ನಿರ್ದೇಶಕ ಡಾ. ಸಿ.ಎನ್.ಮಂಜುನಾಥ್   

ಮೈಸೂರು: ಈ ಬಾರಿ ನಾಡಹಬ್ಬ ದಸರಾ ಮಹೋತ್ಸವ ಉದ್ಘಾಟನೆಗೆ ಜಯದೇವ ಆಸ್ಪತ್ರೆ ನಿರ್ದೇಶಕ ಡಾ. ಸಿ.ಎನ್.ಮಂಜುನಾಥ್ ಅವರನ್ನು ಆಯ್ಕೆ ಮಾಡಲಾಗಿದೆ.

ಅ.17ರಂದು ಚಾಮುಂಡಿಬೆಟ್ಟದಲ್ಲಿ ಮುಖ್ಯಮಂತ್ರಿ ಸಮ್ಮುಖದಲ್ಲಿ ಅವರು ಚಾಲನೆ ನೀಡಲಿದ್ದಾರೆ.

ಈ ವಿಚಾರವನ್ನು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಶನಿವಾರ ಇಲ್ಲಿ ಪ್ರಕಟಿಸಿದರು.ಬಿ.ಎಸ್.ಯಡಿಯೂರಪ್ಪ ಅವರ ಸೂಚನೆ ಮೇರೆಗೆ ಈ ಆಯ್ಕೆ ಮಾಡಲಾಗಿದೆ.

ADVERTISEMENT

ಮೈಸೂರಿನ ಪೌರಕಾರ್ಮಿಕರಾದ ಮರಗಮ್ಮ, ವೈದ್ಯಕೀಯ ಅಧಿಕಾರಿ ಡಾ. ನವೀನ್ ಕುಮಾರ್, ನರ್ಸ್ ರುಕ್ಮಿಣಿ, ಆಶಾ ಕಾರ್ಯಕರ್ತೆ ನೂರ್ ಜಾನ್, ಪೊಲೀಸ್ ಕಾನ್ಸ್ ಟೆಬಲ್ ಪಿ.ಕುಮಾರ್, ಸಾಮಾಜಿಕ ಕಾರ್ಯಕರ್ತ ಆಯೂಬ್ ಅಹಮದ್ ಅವರನ್ನು ದಸರಾ ಉದ್ಘಾಟನಾ ಸಮಾರಂಭದಲ್ಲಿ ಸನ್ಮಾನಿಸಲಾಗುವುದು ಎಂದರು.

ತಜ್ಞರ ತಂಡ ನೀಡಿದ ವರದಿ ಪ್ರಕಾರವಾಗಿಯೇ ದಸರಾ ಆಚರಣೆ ಮಾಡಲಾಗುವುದು. ಇದರಲ್ಲಿ ಯಾವುದೇ ವ್ಯತ್ಯಾಸ ಇರದು. ತಂಡದ ಶಿಫಾರಸಿನ ಅನ್ವಯ ಎಲ್ಲ ಕಾರ್ಯಕ್ರಮಗಳನ್ನು ನಿಗದಿಪಡಿಸುತ್ತೇವೆ. ಈ ಬಗ್ಗೆ ಮುಖ್ಯಮಂತ್ರಿಗೂ ಮಾಹಿತಿ ನೀಡಿದ್ದೇನೆ ಎಂದು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.