ADVERTISEMENT

ಮದ್ಯ‌ದ ನಶೆ: ಗದ್ದೆಗೆ ಮಗುಚಿದ ಕಾರು

​ಪ್ರಜಾವಾಣಿ ವಾರ್ತೆ
Published 5 ಮೇ 2020, 6:22 IST
Last Updated 5 ಮೇ 2020, 6:22 IST
   

ಮೈಸೂರು: ನಂಜನಗೂಡಿನ ಬ್ಯಾಳಾರು ಗ್ರಾಮದ ಸಮೀಪ ಹುಲ್ಲಹಳ್ಳಿ ಮುಖ್ಯ ರಸ್ತೆಯಲ್ಲಿ ಕಾರೊಂದು ಗದ್ದೆಗೆ ಮಗುಚಿದೆ.

ಮದ್ಯ ಸೇವಿಸಿದ‌ ನಶೆಯಲ್ಲಿ ನಿಯಂತ್ರಣ ತಪ್ಪಿ ಅಡ್ಡಾದಿಡ್ಡಿಯಾಗಿ ಚಾಲನೆ ಮಾಡಿದ ಚಾಲಕ ನಂತರ ಗದ್ದೆಯೊಳಗೆ ಕಾರನ್ನು ಇಳಿಸಿದ್ದಾನೆ. ಈ ವೇಳೆ ಕಾರು ಮಗುಚಿದೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.

ಕಾರಿನ ಚಾಲಕನಿಗೆ ಸಣ್ಣ ಪುಟ್ಟ ಗಾಯಗಳಾಗಿವೆ. ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ. ಮದ್ಯ‌ ಸೇವಿಸಿದ ಕುರಿತು ಪರಿಶೀಲನೆ ನಡೆಸಲಾಗುತ್ತಿದೆ ಎಂದು ನಂಜನಗೂಡು ಸಂಚಾರ ಠಾಣೆಯ ಸಬ್ ಇನ್ ಸ್ಪೆಕ್ಟರ್ ಜಯಲಕ್ಷ್ಮಿ ತಿಳಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.