ADVERTISEMENT

ಮದ್ಯಪಾನ ಮಾಡಿದ್ದ ಚಾಲಕ, ನಿರ್ವಾಹಕ ಅಮಾನತು

​ಪ್ರಜಾವಾಣಿ ವಾರ್ತೆ
Published 26 ಆಗಸ್ಟ್ 2023, 6:50 IST
Last Updated 26 ಆಗಸ್ಟ್ 2023, 6:50 IST

ಎಚ್.ಡಿ.ಕೋಟೆ: ‘ಮದ್ಯಪಾನ ಮಾಡಿ ಪ್ರಯಾಣಿಕರಲ್ಲಿ ಆತಂಕ ಉಂಟು ಮಾಡಿದ್ದ ಕೆಎಸ್‌ಆರ್‌ಟಿಸಿ ಬಸ್‌ ಚಾಲಕ ಗೋಪಾಲಕೃಷ್ಣ ಮತ್ತು ನಿರ್ವಾಹಕ ಪ್ರಕಾಶ್ ಅವರನ್ನು ಅಮಾನತು ಮಾಡಲಾಗಿದೆ’ ಎಂದು ಘಟಕದ ವ್ಯವಸ್ಥಾಪಕ ತ್ಯಾಗರಾಜ್ ತಿಳಿಸಿದ್ದಾರೆ.

ಮೈಸೂರಿಗೆ ತೆರಳುತಿದ್ದ ಸಾರಿಗೆ ಬಸ್‌ ಚಾಲಕ, ನಿರ್ವಾಹಕ ಮದ್ಯಪಾನ ಮಾಡಿರುವುದನ್ನು ಗಮನಿಸಿದ ಪ್ರಯಾಣಿಕರು, ಅರ್ಧದಲ್ಲೇ ಬಸ್ ನಿಲ್ಲಿಸಿ ಇಬ್ಬರನ್ನೂ ತರಾಟೆಗೆ ತೆಗೆದುಕೊಂಡಿದ್ದರು. ಇಬ್ಬರನ್ನೂ ಪೊಲೀಸ್ ಠಾಣೆಗೆ ಕರೆತಂದು ದೂರು ನೀಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT