ಮೈಸೂರಿನ ಚಾಮರಾಜಮೊಹಲ್ಲಾದ ಹಜರತ್ ಇಮಾಮ್ ಶಾ ವಲೀ ದರ್ಗಾಕ್ಕೆ ಭೇಟಿ ನೀಡಿದ್ದ ಕ್ಯಾಪ್ಟನ್ ಅಭಿಮನ್ಯು ನೇತೃತ್ವದ ಗಜಪಡೆ ಆಶೀರ್ವಾದ ಪಡೆದವು
–ಪ್ರಜಾವಾಣಿ ಚಿತ್ರ/ ಅನೂಪ್ ರಾಘ ಟಿ.
ಜಂಬೂಸವಾರಿಗೂ ಮುನ್ನ ಚಾಮರಾಜ ಮೊಹಲ್ಲಾದಲ್ಲಿರುವ ಹಜರತ್ ಇಮಾಮ್ ಶಾ ವಲೀ ದರ್ಗಾಕ್ಕೆ ದಸರಾ ಆನೆಗಳು ಬಂದು ‘ಸಲಾಂ’ ಮಾಡಿದವು
ಅಂಬಾರಿ ಆನೆ ಕ್ಯಾಪ್ಟನ್ ‘ಅಭಿಮನ್ಯು’ ನೇತೃತ್ವದ 14 ಆನೆಗಳು ಅರಮನೆ ದಕ್ಷಿಣ ದ್ವಾರವಾದ ‘ಬ್ರಹ್ಮಪುರಿ’ಯಿಂದ ಆಗಮಿಸಿದವು.
ಜಂಬೂಸವಾರಿಗೂ ಮುನ್ನ ದರ್ಗಾದಲ್ಲಿ ಆನೆಗಳ ‘ಸಲಾಂ’
ಸೂಫಿ ಸಂತ ಇಮಾಮ್ ಶಾ ವಲೀ ಅವರಿಗೆ, ಚಾಮುಂಡೇಶ್ವರಿ ದೇವಿಗೆ ಭಕ್ತರು ಜಯಕಾರ ಹಾಕಿದರು
ಧೂಪಾರತಿ ಮಾಡಿದ ನಂತರ ಆನೆಗಳಿಗೆ ವಿಭೂತಿಯನ್ನು ಹಣೆಗೆ ಹಚ್ಚಲಾಯಿತು. ದರ್ಗಾದ ಚಾದರ ಮೇಲಿಟ್ಟಿದ್ದ ನವಿಲುಗರಿಯಿಂದ ಆಶೀರ್ವಾದವನ್ನು ದರ್ಗಾದ ಮುಖ್ಯಸ್ಥ ಮೊಹಮ್ಮದ್ ನಖೀಬುಲ್ಲಾ ಷಾ ಖಾದ್ರಿ ಮಾಡಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.