ಹುಣಸೂರು: ತಾಲ್ಲೂಕಿನ ಹರೀನಹಳ್ಳಿಯ ಪ್ರಗತಿಪರ ರೈತ ಗುರು (41) ಸಾಲಬಾಧೆ ತಾಳಲಾರದೇ ಮಂಗಳವಾರ ಬೆಳಿಗ್ಗೆ ನೇಣು ಹಾಕಿಕೊಂಡು ಮೃತಪಟ್ಟರು.
ಮನೆಯಲ್ಲಿ ಯಾರೂ ಇಲ್ಲದ ವೇಳೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಗುರು ಅವರು ಬ್ಯಾಂಕ್ ಆಫ್ ಇಂಡಿಯಾದಲ್ಲಿ ₹ 5 ಲಕ್ಷ, ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಸಂಸ್ಥೆಯಲ್ಲಿ ₹ 3 ಲಕ್ಷ ಸೇರಿದಂತೆ ಕೈ ಸಾಲ ಮಾಡಿದ್ದರು. ಈ ಸಾಲಿನಲ್ಲಿ ಮಳೆ ಹೆಚ್ಚಾದ್ದರಿಂದ 2 ಎಕರೆ ಪ್ರದೇಶದಲ್ಲಿ ಬೆಳೆದಿದ್ದ ತಂಬಾಕು ಸಂಪೂರ್ಣ ನಷ್ಟವಾಗಿತ್ತು. ಸಾಲಬಾಧೆ ಸಹಿಸದೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪತ್ನಿ ಅಶ್ವಿನಿ ದೂರಿನಲ್ಲಿ ತಿಳಿಸಿದ್ದಾರೆ.
ಮೃತರಿಗೆ ಪುತ್ರಿ, ಪುತ್ರ ಇದ್ದಾರೆ.
ಹುಣಸೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.