ADVERTISEMENT

ಮೈಸೂರು: ಸರಗೂರು ಸಮೀಪ ಆನೆ ದಾಳಿಗೆ ವ್ಯಕ್ತಿ ಸಾವು

​ಪ್ರಜಾವಾಣಿ ವಾರ್ತೆ
Published 7 ಫೆಬ್ರುವರಿ 2021, 7:31 IST
Last Updated 7 ಫೆಬ್ರುವರಿ 2021, 7:31 IST
ಆನೆ ದಾಳಿಯಿಂದ ಮೃತಪಟ್ಟಿರುವ ವ್ಯಕ್ತಿಯನ್ನು ಸ್ಥಳೀಯರು ವಿಕ್ಷೀಸಿದರು.
ಆನೆ ದಾಳಿಯಿಂದ ಮೃತಪಟ್ಟಿರುವ ವ್ಯಕ್ತಿಯನ್ನು ಸ್ಥಳೀಯರು ವಿಕ್ಷೀಸಿದರು.    

ಮೈಸೂರು: ಜಿಲ್ಲೆಯ ಸರಗೂರು ತಾಲ್ಲೂಕಿನ ಹಳೆ ಹೆಗ್ಗುಡಿಲು ಗ್ರಾಮದ ಬಳಿ ಭಾನುವಾರ ಆನೆ ದಾಳಿಯಿಂದ ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆ‌.

ಕೇರಳದ ಜೋಯಿ (45) ಮೃತಪಟ್ಟವರು. ಇವರು ಇಲ್ಲಿ ಜಮೀನನ್ನು ಗುತ್ತಿಗೆಗೆ ಪಡೆದು ಶುಂಠಿ ಬೇಸಾಯ ಮಾಡುತ್ತಿದ್ದರು. ಜಮೀನಿನಲ್ಲಿ ಕೆಲಸ ಮಾಡುವಾಗ ಒಂಟಿ ಸಲಗ ದಾಳಿ ನಡೆಸಿ, ಸೊಂಡಿಲಿನಿಂದ ಎತ್ತಿ ಹಳ್ಳಕ್ಕೆ ಬೀಸಾಡಿದೆ. ಇದರಿಂದ ತೀವ್ರವಾಗಿ ಗಾಯಗೊಂಡ ಇವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ಗ್ರಾಮಸ್ಥರು ತಿಳಿಸಿದ್ದಾರೆ. ಸದ್ಯ ಒಂಟಿ ಸಲಗವು ಜಮೀನಿನಲ್ಲೆ ಅಲೆಯುತ್ತಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT