ಮೈಸೂರು: ಇಲ್ಲಿನ ವಿದ್ಯಾರಣ್ಯಪುರಂನ ಸೂಯೆಜ್ಫಾರಂನಲ್ಲಿ ಬುಧವಾರ ಬೆಂಕಿ ಹೊತ್ತಿಕೊಂಡಿದ್ದು, ಅಗ್ನಿಶಾಮಕಪಡೆ ನಂದಿಸುವ ಕ್ರಿಯೆಯಲ್ಲಿ ತೊಡಗಿದೆ.
ಇಲ್ಲಿರುವ ತ್ಯಾಜ್ಯ ವಿಲೇವಾರಿ ಘಟಕದಲ್ಲಿರುವ ಕಸದ ರಾಶಿಗೆ ಬೆಂಕಿ ಬಿದ್ದಿದೆ. ಇದು ಸುತ್ತಮುತ್ತಲಿನ ನಿವಾಸಿಗಳಲ್ಲಿ ಆತಂಕ ಮೂಡಿಸಿದೆ. ದಟ್ಟವಾದ ಹೊಗೆ ಆವರಿಸಿಕೊಂಡಿದ್ದು, ಬೆಂಕಿಯನ್ನು ನಂದಿಸಲಾಗುತ್ತಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.