ADVERTISEMENT

ಬೆಟ್ಟದಪುರ ಹುಲ್ಲಿನ ಬಣವೆಗಳಿಗೆ ಬೆಂಕಿ: ₹ 1.50 ಲಕ್ಷ ನಷ್ಟ

​ಪ್ರಜಾವಾಣಿ ವಾರ್ತೆ
Published 28 ಫೆಬ್ರುವರಿ 2026, 7:36 IST
Last Updated 28 ಫೆಬ್ರುವರಿ 2026, 7:36 IST
ಬೆಟ್ಟದಪುರ ಸಮೀಪದ ಬೆಟ್ಟದತುಂಗ ಕೆಳಗಿನ ಕೊಪ್ಪಲು ಗ್ರಾಮದಲ್ಲಿ ಹರೀಶ್ ಹಾಗೂ ಯೋಗೇಶ್ ಸಹೋದರರಿಗೆ ಸೇರಿದ ಹುಲ್ಲಿನ ಬಣವೆಗೆ ಬೆಂಕಿ ತಗುಲಿ ಸಂಪೂರ್ಣವಾಗಿ ಸುಟ್ಟು ಭಸ್ಮವಾಗಿರುವುದು
ಬೆಟ್ಟದಪುರ ಸಮೀಪದ ಬೆಟ್ಟದತುಂಗ ಕೆಳಗಿನ ಕೊಪ್ಪಲು ಗ್ರಾಮದಲ್ಲಿ ಹರೀಶ್ ಹಾಗೂ ಯೋಗೇಶ್ ಸಹೋದರರಿಗೆ ಸೇರಿದ ಹುಲ್ಲಿನ ಬಣವೆಗೆ ಬೆಂಕಿ ತಗುಲಿ ಸಂಪೂರ್ಣವಾಗಿ ಸುಟ್ಟು ಭಸ್ಮವಾಗಿರುವುದು   

ಬೆಟ್ಟದಪುರ: ಸಮೀಪದ ಬೆಟ್ಟದತುಂಗ ಕೆಳಗಿನಕೊಪ್ಪಲು ಗ್ರಾಮದಲ್ಲಿ ಹರೀಶ್ ಮತ್ತು ಯೋಗೇಶ್ ಸಹೋದರರಿಗೆ ಸೇರಿದ ಹುಲ್ಲಿನ ಬಣವೆಗಳಿಗೆ ಆಕಸ್ಮಿಕವಾಗಿ ಬೆಂಕಿ ತಗುಲಿ ಎರಡು ಹುಲ್ಲಿನ ಸಂಪೂರ್ಣವಾಗಿ ಸುಟ್ಟು ಭಸ್ಮವಾಗಿವೆ.

ಬೆಂಕಿ ಅವಘಡದಿಂದ ಇವರಿಗೆ ಸುಮಾರು ₹1.50 ಲಕ್ಷ ನಷ್ಟವಾಗಿದೆ ಎಂದು ಅಂದಾಜಿಸಲಾಗಿದೆ. ಬಣವೆ ಸಮೀಪ ವಾಸದ ಮನೆಗಳು ಇದ್ದುದರಿಂದ ಬೆಂಕಿಯ ತೀವ್ರತೆ ಹೆಚ್ಚಾಗುತ್ತಿದ್ದಂತೆ ಅಗ್ನಿಶಾಮಕ ದಳದವರು ಸ್ಥಳಕ್ಕೆ ಬಂದು ಬೆಂಕಿ ನಿಯಂತ್ರಿಸಿದರು.

ಗ್ರಾಮದ ಮುಖಂಡ ಕೃಷ್ಣೇಗೌಡ ಮಾತನಾಡಿ, ‘ವ್ಯವಸಾಯ ಮತ್ತು ಜಾನುವಾರು ಅವಲಂಬಿಸಿ ಜೀವನ ನಡೆಸುತ್ತಿರುವ ಈ ಕುಟುಂಬಕ್ಕೆ  ನಷ್ಟವಾಗಿದ್ದು, ಬೆಂಕಿ ಕಾಣಿಸಿಕೊಂಡ ತಕ್ಷಣ ಅಗ್ನಿಶಾಮಕ ದಳ ಬೆಟ್ಟದಪುರದಲ್ಲಿ ಅಗ್ನಿಶಾಮಕ ದಳದ ಘಟಕವಿದ್ದರೆ ಹೆಚ್ಚಿನ ಅನಾಹುತ ತಪ್ಪಿಸಬಹುದಿತ್ತು. ಪಿರಿಯಾಪಟ್ಟಣದಿಂದ ವಾಹನ ಆಗಮಿಸುವಷ್ಟರಲ್ಲಿ ಸಾಕಷ್ಟು ಹಾನಿ ಸಂಭವಿಸಿದೆ. ಬೆಟ್ಟದಪುರದಲ್ಲಿ ಅಗ್ನಿಶಾಮಕ ದಳದ ಘಟಕ ಪ್ರಾರಂಭಿಸಬೇಕು ಎಂದು ಒತ್ತಾಯಿಸಿದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.