ADVERTISEMENT

ಬುದ್ಧನಗರದ ನಾಮಫಲಕಕ್ಕೆ ಬೆಂಕಿ

​ಪ್ರಜಾವಾಣಿ ವಾರ್ತೆ
Published 19 ನವೆಂಬರ್ 2020, 1:09 IST
Last Updated 19 ನವೆಂಬರ್ 2020, 1:09 IST

ಮೈಸೂರು: ಇಲ್ಲಿನ ಮಾನಂದವಾಡಿ ರಸ್ತೆಯ ನೆಲ್ಲೂರು ಶೆಡ್‌ ಬಡಾವಣೆಯಲ್ಲಿ ಅಳವಡಿಸಿದ್ದ ಬುದ್ಧನಗರ ಎಂಬ ನಾಮಫಲಕಕ್ಕೆ ಮಂಗಳವಾರ ರಾತ್ರಿ ದುಷ್ಕರ್ಮಿಗಳು ಬೆಂಕಿ ಹಚ್ಚಿ ವಿರೂಪಗೊಳಿಸಿದ್ದಾರೆ.

ಈ ನಾಮಫಲಕದಲ್ಲಿ ಬುದ್ಧ, ಬಸವಣ್ಣ, ಡಾ.ಬಿ.ಆರ್.ಅಂಬೇಡ್ಕರ್, ಬಾಬುಜಗಜೀವನರಾಂ ಅವರ ಭಾವಚಿತ್ರಗಳೂ ಇದ್ದು, ಇವೂ ಹಾನಿಗೀಡಾಗಿವೆ.ಅ. 12ರಂದು ನೆಲ್ಲೂರು ಶೆಡ್‌ ಎಂಬ ನಾಮಫಲಕಕ್ಕೆ ಬದಲಾಗಿ ಬುದ್ಧನಗರ ಎಂಬ ನಾಮಫಲಕವನ್ನು ಅಳವಡಿಸಲಾಗಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.

ಅಶೋಕಪುರಂ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ADVERTISEMENT

ಹೆಬ್ಬಾಳದಲ್ಲಿ ಕಳ್ಳತನ

ಮೈಸೂರು: ಇಲ್ಲಿನ ಹೆಬ್ಬಾಳದ ಲಕ್ಷ್ಮೀಕಾಂತನಗರದ ನಿವಾಸಿ ಪುನೀತ್‌ ಎಂಬುವವರ ಮನೆಯಲ್ಲಿ ಕಳ್ಳರು ₹ 70 ಸಾವಿರ ನಗದನ್ನು ಕಳವು ಮಾಡಿದ್ದಾರೆ.

ಪುನೀತ್ ಅವರು ನ. 14ರಂದು ಮನೆಗೆ ಬೀಗ ಹಾಕಿಕೊಂಡು ಸಂಸಾರ ಸಮೇತರಾಗಿ ದೀಪಾವಳಿ ಹಬ್ಬಕ್ಕಾಗಿ ಊರಿಗೆ ಹೋಗಿದ್ದರು. ಬುಧವಾರ ಬೆಳಿಗ್ಗೆ ಮನೆಗೆ ಬಂದಾಗ ಡೋರ್‌ಲಾಕ್ ಮುರಿದಿರುವುದು ಗೊತ್ತಾಗಿದೆ. ಮನೆಯ ಬೀರುವಿನಲ್ಲಿಟ್ಟಿದ್ದ ₹ 70 ಸಾವಿರ ನಗದು ಕಳವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಹೆಬ್ಬಾಳ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.