ADVERTISEMENT

ಪ್ರವಾಹ ಸಂತ್ರಸ್ತರಿಗೆ ಪ್ರಧಾನಿ ಸಾಂತ್ವನ

​ಪ್ರಜಾವಾಣಿ ವಾರ್ತೆ
Published 19 ಅಕ್ಟೋಬರ್ 2020, 10:36 IST
Last Updated 19 ಅಕ್ಟೋಬರ್ 2020, 10:36 IST
ಪ್ರಧಾನಿ ನರೇಂದ್ರ ಮೋದಿ
ಪ್ರಧಾನಿ ನರೇಂದ್ರ ಮೋದಿ   

ಮೈಸೂರು:ಪ್ರವಾಹದಿಂದ ತತ್ತರಿಸಿರುವ ಉತ್ತರ ಕರ್ನಾಟಕದ ಜನತೆಗೆ ಪ್ರಧಾನಿ ನರೇಂದ್ರ ಮೋದಿ ಸಾಂತ್ವನದ ಮಾತುಗಳನ್ನಾಡಿದ್ದಾರೆ.

ವರ್ಚುಯಲ್‌ ವೇದಿಕೆ ಮೂಲಕ ಸೋಮವಾರ ಮೈಸೂರು ವಿಶ್ವವಿದ್ಯಾಲಯದ 100ನೇ ಘಟಿಕೋತ್ಸವ ಭಾಷಣ ಮಾಡಿದ ಅವರು, ‘ಪ್ರವಾಹಪೀಡಿತ ಕುಟುಂಬಗಳಿಗೆ ನನ್ನ ಸಹಾನುಭೂತಿ ವ್ಯಕ್ತಪಡಿಸುತ್ತೇನೆ. ಎಲ್ಲಾ ಸಂತ್ರಸ್ತರಿಗೆ ಪರಿಹಾರ ಒದಗಿಸಲು ಕೇಂದ್ರ ಸರ್ಕಾರವು ರಾಜ್ಯದೊಂದಿಗೆ ಜೊತೆಗೂಡಿ ಪ್ರಯತ್ನ ನಡೆಸುತ್ತಿದೆ’ ಎಂದರು.

ಕೋವಿಡ್‌ ಪರಿಸ್ಥಿತಿಯಿಂದಾಗಲ ಹಲವು ನಿರ್ಬಂಧಗಳಿದ್ದರೂ ಹಬ್ಬ ಆಚರಣೆಗೆ ಜನರಲ್ಲಿ ಉತ್ಸಾಹ ಕುಂದಿಲ್ಲ ಎಂದು ಹೇಳುತ್ತಾ ನಾಡಹಬ್ಬ ದಸರೆಯ ಶುಭಾಶಯ ಕೋರಿದರು

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.