ADVERTISEMENT

ಬಡ ಕಲಾವಿದರಿಗೆ ದಿನಸಿ ಕಿಟ್ ವಿತರಣೆ

​ಪ್ರಜಾವಾಣಿ ವಾರ್ತೆ
Published 23 ಜೂನ್ 2021, 14:51 IST
Last Updated 23 ಜೂನ್ 2021, 14:51 IST
ಮೈಸೂರು ಜಿಲ್ಲಾ ಕಾಂಗ್ರೆಸ್ ಸಮಿತಿ ಹಾಗೂ ಕರ್ನಾಟಕ ರಾಜ್ಯ ಸಿದ್ದರಾಮಯ್ಯ ಅಭಿಮಾನಿಗಳ ಬಳಗದ ವತಿಯಿಂದ ಬುಧವಾರ ಕಾಂಗ್ರೆಸ್ ಭವನದಲ್ಲಿ ವಾದ್ಯಗೋಷ್ಠಿ ವೃತ್ತಿ ಕಲಾವಿದರಿಗೆ ದಿನಸಿ ಕಿಟ್‌ಗಳನ್ನು ವಿತರಿಸಲಾಯಿತು
ಮೈಸೂರು ಜಿಲ್ಲಾ ಕಾಂಗ್ರೆಸ್ ಸಮಿತಿ ಹಾಗೂ ಕರ್ನಾಟಕ ರಾಜ್ಯ ಸಿದ್ದರಾಮಯ್ಯ ಅಭಿಮಾನಿಗಳ ಬಳಗದ ವತಿಯಿಂದ ಬುಧವಾರ ಕಾಂಗ್ರೆಸ್ ಭವನದಲ್ಲಿ ವಾದ್ಯಗೋಷ್ಠಿ ವೃತ್ತಿ ಕಲಾವಿದರಿಗೆ ದಿನಸಿ ಕಿಟ್‌ಗಳನ್ನು ವಿತರಿಸಲಾಯಿತು   

ಮೈಸೂರು: ಜಿಲ್ಲಾ ಕಾಂಗ್ರೆಸ್ ಸಮಿತಿ ಮತ್ತು ಕರ್ನಾಟಕ ರಾಜ್ಯ ಸಿದ್ದರಾಮಯ್ಯ ಅಭಿಮಾನಿಗಳ ಬಳಗದ ವತಿಯಿಂದ ಬುಧವಾರ ಇಲ್ಲಿನ ಜಿಲ್ಲಾ ಕಾಂಗ್ರೆಸ್ ಭವನದಲ್ಲಿ 80ಕ್ಕೂ ಅಧಿಕ ಮಂದಿ ಬಡ ಕಲಾವಿದರಿಗೆ ದಿನಸಿ ಕಿಟ್‌ಗಳನ್ನು ಶಾಸಕ ಡಾ.ಯತೀಂದ್ರ ಸಿದ್ದರಾಮಯ್ಯ ವಿತರಿಸಿದರು.

ಈ ವೇಳೆ ಮಾತನಾಡಿದ ಅವರು, ‘ಶಾಸಕ ಜಮೀರ್ ಅಹಮ್ಮದ್‌ಖಾನ್, ಪಾಲಿಕೆ ಸದಸ್ಯ ಸಮಿವುಲ್ಲಾ (ಅಜ್ಜು) ಮತ್ತು ಕರ್ನಾಟಕ ರಾಜ್ಯ ಸಿದ್ದರಾಮಯ್ಯ ಅಭಿಮಾನಿಗಳ ಬಳಗವು ಜಿಲ್ಲಾ ಕಾಂಗ್ರೆಸ್ ಸಮಿತಿ ಸಹಯೋಗದಲ್ಲಿ ಕೋವಿಡ್ ಸಂಕಷ್ಟಕ್ಕೆ ಸಿಲುಕಿರುವ ಕಲಾವಿದರಿಗೆ ನೆರವಿನ ಹಸ್ತ ಚಾಚಿದ್ದಾರೆ’ ಎಂದು ಶ್ಲಾಘಿಸಿದರು.

ವಿಧಾನಪರಿಷತ್ ಸದಸ್ಯ ಆರ್.ಧರ್ಮಸೇನಾ, ‍ಪಕ್ಷದ ಜಿಲ್ಲಾ (ಗ್ರಾಮಾಂತರ) ಘಟಕದ ಅಧ್ಯಕ್ಷ ಬಿ.ಜೆ.ವಿಜಯಕುಮಾರ್, ಉಪಾಧ್ಯಕ್ಷ ಎಡತಲೆ ಮಂಜುನಾಥ್, ಪಾಲಿಕೆ ಸದಸ್ಯ ಸಮಿವುಲ್ಲಾ (ಅಜ್ಜು), ಬಳಗದ ಅಧ್ಯಕ್ಷ ಹಿನಕಲ್ ಪ್ರಕಾಶ್, ಮುಖಂಡರಾದ ಕೆ.ಮರೀಗೌಡ, ಸುನೀಲ್ ಬೋಸ್, ಎಸ್.ಆರ್.ರವಿ, ಕಿರಣ್, ಕವಿತಾ ಇದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.