ADVERTISEMENT

ಅಂಬೇಡ್ಕರ್ ಜೀವನಾಧಾರಿತ ಧಾರಾವಾಹಿ ಫ್ಲೆಕ್ಸ್‌ಗೆ ಬೆಂಕಿ: ನಾಲ್ವರು ವಶಕ್ಕೆ

​ಪ್ರಜಾವಾಣಿ ವಾರ್ತೆ
Published 14 ಏಪ್ರಿಲ್ 2021, 18:27 IST
Last Updated 14 ಏಪ್ರಿಲ್ 2021, 18:27 IST

ಪಿರಿಯಾಪಟ್ಟಣ (ಮೈಸೂರು ಜಿಲ್ಲೆ): ತಾಲ್ಲೂಕಿನ ಬೆಳತೂರು ಗ್ರಾಮದಲ್ಲಿ, ಡಾ.ಬಿ.ಆರ್ ಅಂಬೇಡ್ಕರ್ ಜೀವನಾಧಾರಿತ ಧಾರಾವಾಹಿ ‘ಮಹಾನಾಯಕ’ ಫ್ಲೆಕ್ಸ್‌ಗೆ ಮಂಗಳವಾರ ರಾತ್ರಿ ಕಿಡಿಗೇಡಿಗಳು ಬೆಂಕಿ ಹಚ್ಚಿ
ಹಾನಿ ಮಾಡಿದ್ದಾರೆ.

ಗ್ರಾಮದ ಅಂಬೇಡ್ಕರ್ ಯುವಕ ಸಂಘದ ಪದಾಧಿಕಾರಿಗಳು, ಅಂಬೇಡ್ಕರ್ ಜನ್ಮದಿನ ಆಚರಿಸಲು ಮಂಗಳವಾರ ರಾತ್ರಿ ತಯಾರಿ ನಡೆಸಿದ್ದರು. ಬೆಂಕಿ ಹಚ್ಚಿರುವುದು ಬುಧವಾರ ನಸುಕಿನಲ್ಲಿ ಗೊತ್ತಾಗಿದೆ.

ಅಂಬೇಡ್ಕರ್ ಯುವಕ ಸಂಘದ ಪದಾಧಿಕಾರಿ ಸ್ವಾಮಿ, ಪಟ್ಟಣದ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು, ನಾಲ್ವರನ್ನುವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಮುನ್ನೆಚ್ಚರಿಕೆ ಕ್ರಮವಾಗಿ, ಗ್ರಾಮದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್‌ ಮಾಡಲಾಗಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.