ADVERTISEMENT

ಸ್ವಾತಂತ್ರ್ಯ ಹೋರಾಟಗಾರ ಜನಾರ್ದನ್‌ ನಿಧನ

​ಪ್ರಜಾವಾಣಿ ವಾರ್ತೆ
Published 15 ಮಾರ್ಚ್ 2021, 4:04 IST
Last Updated 15 ಮಾರ್ಚ್ 2021, 4:04 IST
ಟಿ.ಎಸ್. ಜನಾರ್ದನ್
ಟಿ.ಎಸ್. ಜನಾರ್ದನ್   

ಮೈಸೂರು: ಸ್ವಾತಂತ್ರ್ಯ ಹೋರಾಟಗಾರ ಹಾಗೂ ಇಲ್ಲಿನ ವಿ.ವಿ.ಮೊಹಲ್ಲಾದ ನಿವಾಸಿ ಟಿ.ಎಸ್.ಜನಾರ್ದನ್ (99) ಅವರು ತಮ್ಮ ನಿವಾಸದಲ್ಲಿ ಶನಿವಾರ ನಿಧನರಾದರು. ಇವರಿಗೆ ಮೂವರು ಪುತ್ರರು ಹಾಗೂ ಇಬ್ಬರು ಪುತ್ರಿಯರು ಇದ್ದಾರೆ.

ಇವರ ದೇಹವನ್ನು ಚಾಮರಾಜನಗರ ವೈದ್ಯಕೀಯ ಕಾಲೇಜಿಗೆ ದಾನವಾಗಿ ನೀಡಲಾಯಿತು.

ಇವರು ಕ್ವಿಟ್‌ ಇಂಡಿಯಾ ಚಳವಳಿಯಲ್ಲಿ ಭಾಗಿಯಾಗಿದ್ದರು. 8 ತಿಂಗಳವರೆಗೆ ಸೆರೆಮನೆವಾಸವನ್ನೂ ಅನುಭವಿಸಿದ್ದರು. ನಂತರ, ಮೈಸೂರು ಚಲೋ ಚಳವಳಿಯಲ್ಲಿಯೂ ಮುಂಚೂಣಿಯಲ್ಲಿದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.