ADVERTISEMENT

ಜೂಜಾಟ ನಿಷೇಧಿಸಿದ ಪೊಲೀಸರು

​ಪ್ರಜಾವಾಣಿ ವಾರ್ತೆ
Published 5 ಏಪ್ರಿಲ್ 2019, 19:54 IST
Last Updated 5 ಏಪ್ರಿಲ್ 2019, 19:54 IST

ಮೈಸೂರು: ಯುಗಾದಿ ಹಬ್ಬದ ಪ್ರಯುಕ್ತ ಸಾರ್ವಜನಿಕ ಸ್ಥಳಗಳಲ್ಲಿ ಜೂಜಾಟ ಆಡುವುದನ್ನು ನಗರ ಪೊಲೀಸ್ ಆಯುಕ್ತ ಕೆ.ಟಿ.ಬಾಲಕೃಷ್ಣ ನಿಷೇಧಿಸಿದ್ದಾರೆ.

ಜೂಜಾಟ ಆಡುವವರು, ಸ್ತ್ರೀಯರನ್ನು ಚುಡಾಯಿಸುವವರು, ಮದ್ಯ ಸೇವಿಸಿ ಸಾರ್ವಜನಿಕರಿಗೆ ಕಿರಿಕಿರಿ ಉಂಟು ಮಾಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ಎಚ್ಚರಿಕೆ ನೀಡಿದ್ದಾರೆ.

ಹಬ್ಬದ ಪ್ರಯುಕ್ತ ನಡೆಸುವ ಕಾರ್ಯಕ್ರಮಗಳಿಗೆ ಪೊಲೀಸರಿಂದ ಅನುಮತಿ ಪಡೆಯಬೇಕು, ಧಾರ್ಮಿಕವಾಗಿ ಇತರರಿಗೆ ನೋವುಂಟು ಮಾಡುವ ಘೋಷಣೆಗಳನ್ನು ಕೂಗಬಾರದು, ಮಹಿಳೆಯರು ಓಡಾಡುವಾಗ ತಮ್ಮ ಆಭರಣಗಳನ್ನು ಕುರಿತು ಹೆಚ್ಚಿನ ನಿಗಾ ವಹಿಸಬೇಕು ಎಂದು ಅವರು ಸೂಚಿಸಿದ್ದಾರೆ.

ADVERTISEMENT

ಸಂಶಯಾಸ್ಪದ ವ್ಯಕ್ತಿಗಳು, ವಸ್ತುಗಳು ದೊರಕಿದರೆ ಕೂಡಲೇ ಸಮೀಪದ ಪೊಲೀಸ್ ಠಾಣೆಗೆ ಅಥವಾ ನಿಯಂತ್ರಣ ಸಂಖ್ಯೆ 100, 0821– 2418139, 2418339ಗೆ ಮಾಹಿತಿ ನೀಡಬೇಕು ಎಂದು ಅವರು ಮನವಿ ಮಾಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.