ಪಿರಿಯಾಪಟ್ಟಣ: ತಾಲ್ಲೂಕಿನ ಲಿಂಗಪುರದಲ್ಲಿ ಗಾಂಜಾ ಮಾರಾಟ ಮಾಡಲು ಯತ್ನಿಸುತ್ತಿದ್ದ ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲ್ಲೂಕಿನ ನಿವಾಸಿ ಅಜೀಜ್ ಎಂಬಾತನನ್ನು ಬೈಲುಕುಪ್ಪೆ ಪೊಲೀಸರು ಭಾನುವಾರ ಬಂಧಿಸಿದ್ದಾರೆ.
ಖಚಿತ ಮಾಹಿತಿ ಆಧರಿಸಿ ಆರೋಪಿ ಸೆರೆ ಹಿಡಿದಿದ್ದು, 5 ಕೆಜಿಯಷ್ಟು ಗಾಂಜಾ ವಶಪಡಿಸಿಕೊಳ್ಳಲಾಗಿದೆ.
ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಯನ್ನು ನ್ಯಾಯಾಲಯ ಬಂಧನಕ್ಕೆ ಒಳಪಡಿಸಲಾಗಿದೆ.
ಕಾರ್ಯಾಚರಣೆಯಲ್ಲಿ ಪಿಎಸ್ಐಗಳಾದ ಅಜಯ್ ಕುಮಾರ್, ಮಹಾಲಿಂಗ ಸ್ವಾಮಿ, ಸಿಬ್ಬಂದಿಗಳಾದ ಚೇತನ್ ಕುಮಾರ್, ಮಹದೇವಪ್ಪ, ಮುದ್ದುರಾಜು, ಕುಮಾರಸ್ವಾಮಿ, ಸುರೇಶ್, ಪ್ರದೀಪ್ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.