ಬದನವಾಳು (ಮೈಸೂರು ಜಿಲ್ಲೆ): ಭಾರತ್ ಜೋಡೊ ಯಾತ್ರೆಯಲ್ಲಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಇಲ್ಲಿನ ಖಾದಿ ಗ್ರಾಮೋದ್ಯೋಗ ಕೇಂದ್ರದಲ್ಲಿ ಭಾನುವಾರ ಗಾಂಧಿ ಜಯಂತಿ ಆಚರಿಸಿದರು.
ಕೇಂದ್ರದಲ್ಲಿರುವ ಮಹಾತ್ಮ ಗಾಂಧೀಜಿ ಪುತ್ಥಳಿಗೆ ಪುಷ್ಪ ನಮನ ಸಲ್ಲಿಸಿದರು.ಭಜನೆ ಕಾರ್ಯಕ್ರಮದಲ್ಲಿ ಪಾಲ್ಗೊಂಡರು.
ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಮೊದಲಾದವರು ಪಾಲ್ಗೊಂಡಿದ್ದರು.
ಗ್ರಾಮದಲ್ಲಿ ಮಹಾತ್ಮ ಗಾಂಧೀಜಿಯವರು 1927ರಲ್ಲಿ ಚಾಲನೆ ನೀಡಿದ್ದ ಖಾದಿ ಮತ್ತು ಗ್ರಾಮೋದ್ಯೋಗ ಕೇಂದ್ರಕ್ಕೆ ಕಾಂಗ್ರೆಸ್ ನಾಯಕ
ರಾಹುಲ್ ಗಾಂಧಿ ಭಾನುವಾರ ಭೇಟಿ ನೀಡಿದರು.
ಅಲ್ಲಿ ಕಾರ್ಯನಿರ್ವಹಿಸುವವರೊಂದಿಗೆ ಮಾತುಕತೆ ನಡೆಸಿದರು.
ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಕಾರ್ಯಾಧ್ಯಕ್ಷ ಆರ್.ಧ್ರುವನಾರಾಯಣ ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.