ADVERTISEMENT

ಹುಣಸೂರು: ರಾಷ್ಟ್ರೀಯ ಹೆದ್ದಾರಿಯಲ್ಲಿ ಘನತ್ಯಾಜ್ಯ, ದುರ್ವಾಸನೆ

​ಪ್ರಜಾವಾಣಿ ವಾರ್ತೆ
Published 28 ಜೂನ್ 2023, 13:50 IST
Last Updated 28 ಜೂನ್ 2023, 13:50 IST
ಹುಣಸೂರು ನಗರದ ಅಯ್ಯಪ್ಪ ದೇವಸ್ಥಾನಕ್ಕೆ ತೆರಳುವ ಮಾರ್ಗದಲ್ಲಿ ಘನತ್ಯಾಜ್ಯ ವಿಲೇವಾರಿ ಮಾಡಲಾಗಿದೆ
ಹುಣಸೂರು ನಗರದ ಅಯ್ಯಪ್ಪ ದೇವಸ್ಥಾನಕ್ಕೆ ತೆರಳುವ ಮಾರ್ಗದಲ್ಲಿ ಘನತ್ಯಾಜ್ಯ ವಿಲೇವಾರಿ ಮಾಡಲಾಗಿದೆ   

ಹುಣಸೂರು: ನಗರದ ಕಲ್ಕುಣಿಕೆ ಹೌಸಿಂಗ್ ಬೋರ್ಡ್ ಬಡಾವಣೆಗೆ ಹೊಂದಿಕೊಂಡಿರುವ ರಾಷ್ಟ್ರೀಯ ಹೆದ್ದಾರಿ 275ರಲ್ಲಿ ಘನ ತ್ಯಾಜ್ಯ ವಿಲೇವಾರಿ ಮಾಡಿದ್ದು, ಇದರಿಂದ ದುರ್ವಾಸನೆ ಬರುತ್ತಿದೆ.

ಅಯ್ಯಪ್ಪ ದೇವಸ್ಥಾನಕ್ಕೆ ತೆರಳಲು ಭಕ್ತರು ಈ ಮಾರ್ಗದಲ್ಲೇ ಹಾದು ಹೋಗಬೇಕಿದ್ದು, ನಗರಸಭೆ ಘನತ್ಯಾಜ್ಯ ತೆರವುಗೊಳಿಸಬೇಕು ಮತ್ತು ತ್ಯಾಜ್ಯ ವಿಲೇವಾರಿ ಮಾಡುವ ಸಾರ್ವಜನಿಕರಿಗೆ ದಂಡ ವಿಧಿಸಿ ಹೀಗೆ ಬೇರೆಯವರು ಕಸ ಚೆಲ್ಲದಂತೆ ಎಚ್ಚರಿಕೆ ನೀಡಬೇಕು.

ನಗರ ಸೌಂದರ್ಯ ಕಾಪಾಡಬೇಕಿರುವ ನಗರಸಭೆ ಜನಜಾಗೃತಿ ಜಾಥಾ ಕಾರ್ಯಕ್ರಮ ಹಮ್ಮಿಕೊಂಡು ಘನ ತ್ಯಾಜ್ಯ ವೈಜ್ಞಾನಿಕವಾಗಿ ವಿಲೇವಾರಿ ಮಾಡಲು ಸಹಕರಿಸಬೇಕು ಮತ್ತು ಜನರಲ್ಲಿ ಜಾಗೃತಿ ಮೂಡಿಸಬೇಕು.

ADVERTISEMENT

ಉಷಾ, ಕಲ್ಲುಣಿಕೆ ಬಡಾವಣೆ ನಿವಾಸಿ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.