ಮೈಸೂರು: ಅಕ್ರಮವಾಗಿ ಗ್ಯಾಸ್ ರೀಫಿಲ್ಲಿಂಗ್ ಮಾಡುತ್ತಿದ್ದ ಗೌಸಿಯಾನಗರದ ಸಮೀರ್ (28) ಎಂಬಾತನನ್ನು ಬಂಧಿಸಿರುವ ಅಪರಾಧ ಪತ್ತೆ ದಳ ಹಾಗೂ ಉದಯಗಿರಿ ಠಾಣೆ ಪೊಲಿಸರು 7 ಗ್ಯಾಸ್ ಸಿಲಿಂಡರ್ ಹಾಗೂ ₹ 3,410 ನಗದು ವಶಪಡಿಸಿಕೊಂಡಿದ್ದಾರೆ.
ಗೌಸಿಯಾನಗರದ ಮಹಮದೀಯ ರಸ್ತೆಯಲ್ಲಿ ಚಾವಣಿ ಇಲ್ಲದ ಶೆಡ್ನಲ್ಲಿ ಅಕ್ರಮವಾಗಿ ಗ್ಯಾಸ್ ರೀಫಿಲ್ಲಿಂಗ್ ಮಾಡುತ್ತಿದ್ದಾಗ ಪೊಲೀಸರು ದಾಳಿ ನಡೆಸಿದರು. ದಾಳಿ ವೇಳೆ ಆಹಾರ ಇಲಾಖೆಯ ಅಧಿಕಾರಿಗಳೂ ಇದ್ದರು. ಪ್ರಕರಣ ಉದಯಗಿರಿ ಠಾಣೆಯಲ್ಲಿ ದಾಖಲಾಗಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.