ADVERTISEMENT

ಸಿದ್ದರಾಮಯ್ಯಗೆ ಭಾರತ ರತ್ನ ನೀಡಿ: ಕಾಂಗ್ರೆಸ್ ಮುಖಂಡ ಬಿ.ಕೆ.ಪ್ರಕಾಶ್

​ಪ್ರಜಾವಾಣಿ ವಾರ್ತೆ
Published 23 ಏಪ್ರಿಲ್ 2024, 16:05 IST
Last Updated 23 ಏಪ್ರಿಲ್ 2024, 16:05 IST
   

ಮೈಸೂರು: ‘ಮಾನವ ಕಲ್ಯಾಣಕ್ಕಾಗಿ, ಆರ್ಥಿಕ ಅಭಿವೃದ್ಧಿಗಾಗಿ ವಿವಿಧ ಗ್ಯಾರಂಟಿಗಳ ಮೂಲಕ ದೇಶದಲ್ಲಿಯೇ ಅಪರೂಪದ ಕೆಲಸ ಮಾಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ‘ಭಾರತ ರತ್ನ’ ನೀಡಿ ಗೌರವಿಸಬೇಕು’ ಎಂದು ಕಾಂಗ್ರೆಸ್ ಮುಖಂಡ ಬಿ.ಕೆ.ಪ್ರಕಾಶ್ ಒತ್ತಾಯಿಸಿದರು.

ನಗರದಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಜನ ಕಲ್ಯಾಣ ಆರ್ಥಿಕ ಸಿದ್ಧಾಂತದ ಮೂಲಕ ಜಗತ್ತಿನಲ್ಲಿ ಪ್ರಸಿದ್ಧರಾಗಿರುವ ಅಮರ್ತ್ಯ ಸೇನ್ ಅವರಿಗೆ ‘ಭಾರತ ರತ್ನ’ ನೀಡಲಾಗಿದೆ. ಅದೇ ಸಿದ್ಧಾಂತವನ್ನು ಸಾರ್ವಜನಿಕ ಕಾರ್ಯಕ್ರಮಗಳ ಮೂಲಕ ಜಾರಿ ಮಾಡಿರುವ ಸಿದ್ದರಾಮಯ್ಯ ಅವರೂ ಪದ್ಮ ಪುರಸ್ಕಾರ, ‘ಭಾರತ ರತ್ನ’ಕ್ಕೆ ಅರ್ಹರು. ಈ ಬಗ್ಗೆ ಕೇಂದ್ರ ಸೂಕ್ತ ಕ್ರಮ ಕೈಗೊಳ್ಳಬೇಕು’ ಎಂದು ಆಗ್ರಹಿಸಿದರು.

ಕಾಂಗ್ರೆಸ್ ನಗರ ಘಟಕದ ಅಧ್ಯಕ್ಷ ಆರ್.ಮೂರ್ತಿ, ಮೈಸೂರು– ಕೊಡಗು ಕ್ಷೇತ್ರದ ಮಾಧ್ಯಮ ಸಂಯೋಜಕಿ ಮಲ್ಲಿಗೆ ವೀರೇಶ್, ಗೋಪಿನಾಥ್, ಲತಾ ಮೋಹನ್ ಇದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.