ADVERTISEMENT

ಚಿನ್ನದ ಪದಕ ದತ್ತಿ: ಹಣ ಹಸ್ತಾಂತರ

​ಪ್ರಜಾವಾಣಿ ವಾರ್ತೆ
Published 11 ಆಗಸ್ಟ್ 2022, 13:02 IST
Last Updated 11 ಆಗಸ್ಟ್ 2022, 13:02 IST
ಕಾಂಗ್ರೆಸ್‌ ನಾಯಕ ಸಿದ್ದರಾಮಯ್ಯ ಅವರ 75ನೇ ಜನ್ಮದಿನೋತ್ಸವ ಅಂಗವಾಗಿ ಪಕ್ಷದ ಗ್ರಾಮಾಂತರ ಜಿಲ್ಲಾ ಸಮಿತಿಯಿಂದ ಮೈಸೂರು ವಿಶ್ವವಿದ್ಯಾಲಯದಲ್ಲಿ ಚಿನ್ನದ ಪದಕ ದತ್ತಿಗೆ ₹ 1.05 ಲಕ್ಷವನ್ನು ಕುಲಪತಿ ಪ್ರೊ.ಜಿ.ಹೇಮಂತ್‌ಕುಮಾರ್ ಮತ್ತು ಕುಲಸಚಿವ ಪ್ರೊ.ಆರ್.ಶಿವಪ್ಪ ಅವರಿಗೆ ಮುಖಂಡರು ಗುರುವಾರ ಹಸ್ತಾಂತರಿಸಿದರು
ಕಾಂಗ್ರೆಸ್‌ ನಾಯಕ ಸಿದ್ದರಾಮಯ್ಯ ಅವರ 75ನೇ ಜನ್ಮದಿನೋತ್ಸವ ಅಂಗವಾಗಿ ಪಕ್ಷದ ಗ್ರಾಮಾಂತರ ಜಿಲ್ಲಾ ಸಮಿತಿಯಿಂದ ಮೈಸೂರು ವಿಶ್ವವಿದ್ಯಾಲಯದಲ್ಲಿ ಚಿನ್ನದ ಪದಕ ದತ್ತಿಗೆ ₹ 1.05 ಲಕ್ಷವನ್ನು ಕುಲಪತಿ ಪ್ರೊ.ಜಿ.ಹೇಮಂತ್‌ಕುಮಾರ್ ಮತ್ತು ಕುಲಸಚಿವ ಪ್ರೊ.ಆರ್.ಶಿವಪ್ಪ ಅವರಿಗೆ ಮುಖಂಡರು ಗುರುವಾರ ಹಸ್ತಾಂತರಿಸಿದರು   

ಮೈಸೂರು: ಕಾಂಗ್ರೆಸ್‌ ನಾಯಕ ಸಿದ್ದರಾಮಯ್ಯ ಅವರ 75ನೇ ಜನ್ಮದಿನೋತ್ಸವ ಅಂಗವಾಗಿ ಪಕ್ಷದ ಗ್ರಾಮಾಂತರ ಜಿಲ್ಲಾ ಸಮಿತಿಯಿಂದ ಮೈಸೂರು ವಿಶ್ವವಿದ್ಯಾಲಯದಲ್ಲಿ ಚಿನ್ನದ ಪದಕ ದತ್ತಿ ಸ್ಥಾಪಿಸಲಾಗಿದ್ದು, ₹ 1.05 ಲಕ್ಷವನ್ನು ಕುಲಪತಿ ಪ್ರೊ.ಜಿ.ಹೇಮಂತ್‌ಕುಮಾರ್ ಮತ್ತು ಕುಲಸಚಿವ ಪ್ರೊ.ಆರ್.ಶಿವಪ್ಪ ಅವರಿಗೆ ಗುರುವಾರ ಅಧಿಕೃತವಾಗಿ ಹಸ್ತಾಂತರಿಸಲಾಯಿತು.

ಕ್ರಾಫರ್ಡ್‌ ಹಾಲ್‌ ಆವರಣದಲ್ಲಿ, ನಾಗಲಿಂಗ ಪುಷ್ಪ ಸಸಿಯನ್ನೂ ನೆಟ್ಟರು. ನಂತರ 75 ತೆಂಗಿನ ಸಸಿಗಳನ್ನು ರೈತ ಸಂಘದ ಪದಾಧಿಕಾರಿಗಳಿಗೆ ವಿತರಿಸಲಾಯಿತು.

ವರುಣಾ ಶಾಸಕ ಡಾ.ಯತೀಂದ್ರ ಸಿದ್ದರಾಮಯ್ಯ, ಪಕ್ಷದ ಜಿಲ್ಲಾ ಘಟಕದ ಅಧ್ಯಕ್ಷ ಡಾ.ಬಿ.ಜೆ.ವಿಜಯ್‌ಕುಮಾರ್‌, ಮುಖಂಡರಾದ ಕೆ.ಮರಿಗೌಡ, ವಿದ್ಯಾಸಾಗರ್, ಮಂಜು ಕಿರಣ್ ಭಾಗವಹಿಸಿದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.