ADVERTISEMENT

ಜಿಟಿಡಿಗೆ ಮಂಜುನಾಥ್ ಕೃತಜ್ಞತೆ

​ಪ್ರಜಾವಾಣಿ ವಾರ್ತೆ
Published 12 ಡಿಸೆಂಬರ್ 2019, 10:08 IST
Last Updated 12 ಡಿಸೆಂಬರ್ 2019, 10:08 IST
ಮೈಸೂರಿನಲ್ಲಿ ಬುಧವಾರ ಜೆಡಿಎಸ್‌ ಶಾಸಕ ಜಿ.ಟಿ.ದೇವೇಗೌಡರ ನಿವಾಸಕ್ಕೆ ಭೇಟಿ ನೀಡಿದ ಹುಣಸೂರು ಶಾಸಕ ಎಚ್‌.ಪಿ.ಮಂಜುನಾಥ್‌ ಸಮಾಲೋಚನೆ ನಡೆಸಿದರು –ಪ್ರಜಾವಾಣಿ ಚಿತ್ರ
ಮೈಸೂರಿನಲ್ಲಿ ಬುಧವಾರ ಜೆಡಿಎಸ್‌ ಶಾಸಕ ಜಿ.ಟಿ.ದೇವೇಗೌಡರ ನಿವಾಸಕ್ಕೆ ಭೇಟಿ ನೀಡಿದ ಹುಣಸೂರು ಶಾಸಕ ಎಚ್‌.ಪಿ.ಮಂಜುನಾಥ್‌ ಸಮಾಲೋಚನೆ ನಡೆಸಿದರು –ಪ್ರಜಾವಾಣಿ ಚಿತ್ರ   

ಮೈಸೂರು: ಹುಣಸೂರು ಕ್ಷೇತ್ರದ ಉಪಚುನಾವಣೆಯಲ್ಲಿ ಗೆಲುವು ಸಾಧಿಸಿದ ಕಾಂಗ್ರೆಸ್‌ನ ಎಚ್‌.ಪಿ.ಮಂಜುನಾಥ್‌ ಅವರು ಬುಧವಾರ ಜೆಡಿಎಸ್‌ ಶಾಸಕ ಜಿ.ಟಿ.ದೇವೇಗೌಡರ ನಿವಾಸಕ್ಕೆ ತೆರಳಿ ಕೃತಜ್ಞತೆ ಸಲ್ಲಿಸಿದರು.

‘ಕಾಂಗ್ರೆಸ್‌ ಗೆಲುವಿನ ಬಗ್ಗೆ ಉಪಚುನಾವಣೆ ಘೋಷಣೆಗೆ ಮುನ್ನವೇ ಜಿ.ಟಿ.ದೇವೇಗೌಡರು ಭವಿಷ್ಯ ನುಡಿದಿದ್ದು ನೆರವಾಯಿತು. ಹೀಗಾಗಿ, ಕೃತಜ್ಞತೆ ಸಲ್ಲಿಸಲು ಬಂದಿದ್ದೇನೆ’ ಎಂದು ನೂತನ ಶಾಸಕ ಮಂಜುನಾಥ್ ಹೇಳಿದರು.

‘ಜಿ.ಟಿ.ದೇವೇಗೌಡರ ಪತ್ನಿ ಲಲಿತಾ, ಅವರ ಪುತ್ರ ಹರೀಶ್ ಗೌಡ ತಮ್ಮ ಚುನಾವಣೆ ಎಂಬಂತೆ ನನ್ನ ಬೆನ್ನಿಗೆ ನಿಂತು ಗೆಲುವಿನಲ್ಲಿ ಮಹತ್ವದ ಪಾತ್ರ ವಹಿಸಿದರು’ ಎಂದು ಶ್ಲಾಘಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.