ಮೈಸೂರು: ಸಿದ್ದರಾಮಯ್ಯ ಸಿಎಂ ಕುರ್ಚಿ ವಿಚಾರ ಬಿಟ್ಟು ಬರ ಪರಿಸ್ಥಿತಿಯತ್ತ ಗಮನ ಹರಿಸಲಿ ಎಂದು ಶಾಸಕ ಜಿ.ಟಿ. ದೇವೇಗೌಡ ಸಲಹೆ ನೀಡಿದರು.
ನಗರದಲ್ಲಿ ಗುರುವಾರ ಸಂಜೆ ಪತ್ರಕರ್ತರ ಜೊತೆ ಮಾತನಾಡಿದ ಅವರು, ‘ಸಿದ್ದರಾಮಯ್ಯ 2013ರಲ್ಲಿ ಮುಖ್ಯಮಂತ್ರಿ ಆಗಿದ್ದಾಗ ಇದ್ದ ಪರಿಸ್ಥಿತಿಯೇ ಈಗಲೂ ಇದೆ. ಎರಡೂವರೆ ವರ್ಷದ ಬಳಿಕ ಮುಖ್ಯಮಂತ್ರಿ ಆಗುತ್ತೇನೆಂದು ಡಿ.ಕೆ. ಶಿವಕುಮಾರ್ ಎಲ್ಲಿಯೂ ಹೇಳಿಲ್ಲ. ಹಾಗಾಗಿ ಸಿದ್ದರಾಮಯ್ಯ ಅವರೇ ಐದು ವರ್ಷ ಮುಖ್ಯಮಂತ್ರಿ ಆಗಿರುತ್ತಾರೆ. ವಾಸ್ತವ ಹೀಗಿರುವಾಗ ಸಿದ್ದರಾಮಯ್ಯ ಬರದಿಂದ ಕಂಗೆಟ್ಟಿರುವ ಜನರತ್ತ ಗಮನ ಹರಿಸಬೇಕು’ ಎಂದು ಆಗ್ರಹಿಸಿದರು.
‘ರಾಜ್ಯದಲ್ಲಿ ಭೀಕರ ಬರಗಾಲ ಉಂಟಾಗಿದೆ. ದಿನದಿಂದ ದಿನಕ್ಕೆ ಪರಿಸ್ಥಿತಿ ಬಿಗಡಾಯಿಸುತ್ತಿದೆ. ಆದರೂ ಯಾವೊಬ್ಬ ಸಚಿವರು ಇತ್ತ ಗಮನ ಹರಿಸುತ್ತಿಲ್ಲ. ಬರ ಪರಿಹಾರಕ್ಕಾಗಿ ಸಭೆ ನಡೆಸುತ್ತಿಲ್ಲ. ಹಳ್ಳಿಗಳಲ್ಲಿ ವಿದ್ಯುತ್ ಸಮಸ್ಯೆ ತೀವ್ರಗೊಂಡಿದೆ. ಸಮರ್ಪಕ ವಿದ್ಯುತ್ ಪೂರೈಕೆಗೆ ಸರ್ಕಾರ ಕ್ರಮ ಕೈಗೊಳ್ಳಬೇಕು’ ಎಂದು ಒತ್ತಾಯಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.