ADVERTISEMENT

ನಂಜನಗೂಡಿನ ಹದಿನಾರು ಕಾಲು ಮಂಟಪ ಮುಳುಗಡೆ

ಕಪಿಲಾ ನದಿಯಲ್ಲಿ ನೀರಿನ ಹರಿವು ಹೆಚ್ಚಳ; ಮುಡಿ ಸೇವೆ ರದ್ದು

​ಪ್ರಜಾವಾಣಿ ವಾರ್ತೆ
Published 24 ಜುಲೈ 2021, 6:43 IST
Last Updated 24 ಜುಲೈ 2021, 6:43 IST
ನಂಜನಗೂಡಿನ ಕಪಿಲಾ ನದಿಯಲ್ಲಿನ ಹದಿನಾರು ಕಾಲು ಮಂಟಪ ಶುಕ್ರವಾರ ಭಾಗಶಃ ಮುಳುಗಡೆಯಾಗಿದೆ
ನಂಜನಗೂಡಿನ ಕಪಿಲಾ ನದಿಯಲ್ಲಿನ ಹದಿನಾರು ಕಾಲು ಮಂಟಪ ಶುಕ್ರವಾರ ಭಾಗಶಃ ಮುಳುಗಡೆಯಾಗಿದೆ   

ನಂಜನಗೂಡು: ಕಪಿಲಾ ನದಿಯಲ್ಲಿ ನೀರಿನ ಹರಿವು ಹೆಚ್ಚಾಗಿದ್ದು, ಸ್ನಾನಘಟ್ಟದ ಬಳಿಯ ಐತಿಹಾಸಿಕ ಹದಿನಾರು ಕಲ್ಲು ಮಂಟಪ ಹಾಗೂ ಸೋಪಾನ ಕಟ್ಟೆಗಳು ಮುಳುಗಿವೆ.

ತಾಲ್ಲೂಕಿನ ಬೊಕ್ಕಹಳ್ಳಿ, ಕುಳ್ಳಂಕನ ಹುಂಡಿ ನಗರದ ಹಳ್ಳದಕೇರಿ, ಕುರಬಗೇರಿ, ಗೌರಿ ಘಟ್ಟ, ತೋಪಿನ ಬೀದಿಯ ತಗ್ಗು ಪ್ರದೇಶಗಳು ಮುಳುಗಡೆಯಾಗುವ ಸಂಭವವಿದೆ. ನದಿಯಲ್ಲಿ ಪ್ರವಾಹ ಹೆಚ್ಚಾದರೆ, ತಗ್ಗು ಪ್ರದೇಶದಲ್ಲಿ ವಾಸವಾಗಿರುವ ಜನರನ್ನು ಸುರಕ್ಷಿತ ಪ್ರದೇಶಗಳಿಗೆ ಸ್ಥಳಾಂತರಿಸಲು ತಾಲ್ಲೂಕು ಆಡಳಿತ ಮುಂದಾಗಿದೆ.

‘ಕೇರಳದ ವೈನಾಡಿನಲ್ಲಿ ಹೆಚ್ಚು ಮಳೆಯಾಗುತ್ತಿದ್ದು, ಕಬಿನಿ ಜಲಾಶಯಕ್ಕೆ ಒಳಹರಿವಿನ ಪ್ರಮಾಣ ಹೆಚ್ಚಾಗಿದೆ. ಇದರಿಂದ 30 ಸಾವಿರ ಕ್ಯುಸೆಕ್‌ ನೀರನ್ನು ನದಿಗೆ ಹರಿಸಲಾಗುತ್ತಿದೆ. ನದಿ ಪಾತ್ರದ ಜನರು ಎಚ್ಚರಿಕೆ ವಹಿಸಬೇಕು’ ಎಂದು ತಹಶೀಲ್ದಾರ್ ಮೋಹನ ಕುಮಾರಿ ತಿಳಿಸಿದರು.

ADVERTISEMENT

ಮುಡಿ ಸೇವೆ ರದ್ದು: ‘ಕಪಿಲಾ ನದಿಯಲ್ಲಿ ನೀರಿನ ಮಟ್ಟ ಹೆಚ್ಚಾಗುತ್ತಿರುವುದರಿಂದ ಸ್ನಾನ ಘಟ್ಟದಲ್ಲಿ ಸ್ನಾನ ಮಾಡುವುದನ್ನು ನಿರ್ಬಂಧಿಸಲಾಗಿದೆ. ಶ್ರೀಕಂಠೇಶ್ವರ ಸ್ವಾಮಿ ದೇವಾಲಯದ ವತಿಯಿಂದ ನಡೆಸಲಾಗುತ್ತಿದ್ದ ಮುಡಿ ಸೇವೆಯನ್ನು ತಾತ್ಕಾಲಿಕವಾಗಿ ರದ್ದುಪಡಿಸಲಾಗಿದೆ’ ಎಂದು ದೇವಾಲಯದ ಇಒ ರವೀಂದ್ರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.