ಎಚ್.ಡಿ.ಕೋಟೆ: ತಾಲ್ಲೂಕಿನ ಹೈರಿಗೆಯ ರೈತ ಪ್ರಕಾಶ್ ಎಂಬುವವರ ಜಮೀನಿನಲ್ಲಿ ಶುಕ್ರವಾರ ಚಿರತೆ ದಾಳಿ ಮಾಡಿದ ಪರಿಣಾಮ ಜಾನುವಾರು ಸ್ಥಳದಲ್ಲಿಯೇ ಮೃತಪಟ್ಟಿದೆ.
‘ಈ ಭಾಗದಲ್ಲಿ ಚಿರತೆ ಹಾವಳಿ ನಿರಂತರವಾಗಿದೆ. ರೈತರಲ್ಲಿ ಆತಂಕ ಮನೆ ಮಾಡಿದ್ದು, ಜಮೀನುಗಳಲ್ಲಿ ಬೇಸಾಯ ಮಾಡಲು ಸಾಧ್ಯವಾಗುತ್ತಿಲ್ಲ. ರಾತ್ರಿ ವೇಳೆಯಲ್ಲಿ ನೀರು ಹಾಯಿಸಲು ತೀವ್ರ ಸಮಸ್ಯೆ ಎದುರಾಗಿದೆ. ಬೆಳೆಗಳು ಒಣಗುತ್ತಿವೆ’ ಎಂದು ರೈತ ಪ್ರಕಾಶ್ ತಿಳಿಸಿದರು.
‘ಅರಣ್ಯ ಇಲಾಖೆಗೆ ಚಿರತೆ ಓಡಾಟದ ಬಗ್ಗೆ ಹಲವು ಬಾರಿ ಮನವಿ ಮಾಡಿದ್ದು, ಚಿರತೆಯ ಸೆರೆಗಾಗಿ ಬೋನು ಇರಿಸುವಂತೆ ಒತ್ತಾಯ ಮಾಡಿದ್ದೇವೆ. ಆದರೂ ಯಾವುದೇ ಕ್ರಮ ಕೈಗೊಂಡಿಲ್ಲ’ ಎಂದು ಆರೋಪಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.