ಮೈಸೂರು: ನಗರದಲ್ಲಿ ಮಂಗಳವಾರ ರಾತ್ರಿ ಬಿರುಸಿನಿಂದ ಮಳೆ ಸುರಿಯಿತು. ಬಲವಾದ ಬಿರುಗಾಳಿ ಸಹಿತ ಮಳೆಯಿಂದ ವಾಹನ ಸಂಚಾರ ಅಸ್ತವ್ಯಸ್ತಗೊಂಡಿತು.
ಅಪೊಲೊ ಆಸ್ಪತ್ರೆ ಮುಂಭಾಗದ ರಸ್ತೆಯು ಕೆರೆಯಂತಾಯಿತು. ಕುವೆಂಪುನಗರದ ಉದಯರವಿ ರಸ್ತೆಯ ಕಾಂಪ್ಲೆಕ್ಸ್ ಬಳಿ ಹಾಗೂ ಜಯನಗರದ ಇಸ್ಕಾನ್ ದೇವಸ್ಥಾನದ ಸಮೀಪ ಮರಗಳು ಉರುಳಿ ಬಿದ್ದವು
ನಗರ ಹಲವು ಭಾಗಗಳಲ್ಲಿ ವಿದ್ಯುತ್ ಕಡಿತಗೊಂಡಿತ್ತು. ಹಲವು ರಸ್ತೆಗಳಲ್ಲಿ ನೀರು ಕಾಲುವೆಯಂತೆ ಹರಿಯಿತು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.