ಪಿರಿಯಾಪಟ್ಟಣ: ಪಟ್ಟಣ ಸೇರಿದಂತೆ ಸುತ್ತಮುತ್ತಲಿನ ಗ್ರಾಮಗಳಲ್ಲಿ ಗುಡುಗು, ಸಿಡಿಲು ಸಹಿತ ಮಳೆಯಾಗಿದ್ದು ಕೆಲವು ಗ್ರಾಮಗಳಲ್ಲಿ ಹಾನಿಯುಂಟಾಗಿದೆ.
ಸೋಮವಾರ ಸಂಜೆ 4 ಗಂಟೆಗೆ ಸಮಯದಲ್ಲಿ ಗಾಳಿ ಸಹಿತ ಮಳೆ ಬಿದ್ದು, ತಾಲ್ಲೂಕಿನ ಹುಣಸೇಕುಪ್ಪೆ, ಪಾರೆಕೊಪ್ಪಲು, ಚೌಕೂರು ಸೇರಿದಂತೆ ಹಲವೆಡೆ ಮರ, ವಿದ್ಯುತ್ ಕಂಬಗಳು ಧರೆಗುರುಳಿವೆ.
ಪಟ್ಟಣದ ಶಿವಪ್ಪ ಬಡಾವಣೆ, ಪರಿಸರ ನಗರ ಬಡಾವಣೆಗಳಲ್ಲಿ ಮನೆಗಳಿಗೆ ನೀರು ನುಗ್ಗಿ ನಿವಾಸಿಗಳು ಪರದಾಡುವಂತಾಯಿತು. ಈ ವೇಳೆ ಪಟ್ಟಣದ ಡಿಪಿಬಿಎಸ್ ಸರ್ಕಾರಿ ಪ್ರೌಢಶಾಲೆ ಆವರಣದಲ್ಲಿ ಮಳೆಯ ನೀರು ನಿಂತ ದೃಶ್ಯ
ಕಂಡು ಬಂದಿತು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.