ನಂಜನಗೂಡು: ತಾಲ್ಲೂಕಿನ ಹೆಳವರ ಹುಂಡಿ ಗ್ರಾಮದಲ್ಲಿ ಶನಿವಾರ ರಾತ್ರಿ ಸುರಿದ ಧಾರಾಕಾರ ಮಳೆಗೆ ಮನೆ ಗೋಡೆ ಕುಸಿದು ಬಿದ್ದಿದೆ. ಕುಟುಂಬ ಸದಸ್ಯರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಗ್ರಾಮದ ರಾಜಮ್ಮ ಎಂಬವರಿಗೆ ಸೇರಿದ ಮನೆಯ ಗೋಡೆ ಕುಸಿದು ಬಿದ್ದು ತಕ್ಷಣ ಮನೆಯಲ್ಲಿದ್ದ ಕುಟುಂಬಸ್ಥರು ಹೊರಗೆ ಬಂದು ಪಾರಾಗಿದ್ದಾರೆ, ಮನೆಯಲ್ಲಿದ್ದ ದವಸ,ಧಾನ್ಯ, ಪಾತ್ರೆಗಳು ನಾಶವಾಗಿವೆ.
ಗ್ರಾಮ ಪಂಚಾಯತಿ ಆಶ್ರಯ ಮನೆ ಮಂಜೂರು ಮಾಡಿಲ್ಲ, ನಾವು ಹಳೆ ಮನೆಯಲ್ಲಿಯೇ ವಾಸವಾಗಿದ್ದೇವೆ. ಸರ್ಕಾರ ಪರಿಹಾರ ನೀಡಬೇಕು ಎಂದು ರಾಜಮ್ಮ ಮನವಿ ಮಾಡಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.