ಮೈಸೂರು: ‘ಹುಣಸೂರು ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಎಚ್.ಪಿ. ಮಂಜುನಾಥ್’ ಎಂದು ಸಿದ್ದರಾಮಯ್ಯ ಶನಿವಾರ ಇಲ್ಲಿ ಘೋಷಣೆ ಮಾಡಿದರು.
‘2006ರಲ್ಲಿ ನಾನು ಸ್ಪರ್ಧಿಸಿದ್ದ ಚಾಮುಂಡೇಶ್ವರಿ ಕ್ಷೇತ್ರದ ಉಪಚುನಾವಣಾ ಮಾದರಿಯಲ್ಲಿಯೇ ಹುಣಸೂರು ಉಪಚುನಾವಣೆ ನಡೆಯಬೇಕು’ ಎಂದರು.
ವಿರೋಧ ಪಕ್ಷದ ನಾಯಕರಾದ ಮೇಲೆ ಮೊದಲ ಬಾರಿ ಮೈಸೂರಿಗೆ ಬಂದ ಸಿದ್ದರಾಮಯ್ಯ ಅವರಿಗೆ
ಅದ್ಧೂರಿ ಸ್ವಾಗತ ನೀಡಲಾಯಿತು.
ನಂತರ ತೆರೆದ ವಾಹನದಲ್ಲಿ ಮೆರವಣಿಗೆ ಮಾಡಲಾಯಿತು.
ಈ ಸಮಾವೇಶ ಹುಣಸೂರು ಉಪಚುನಾವಣಾ ಪ್ರಚಾರ ಸಭೆಯಾಗಿಯೂ ಪರಿವರ್ತನೆ
ಗೊಂಡಿತು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.