ADVERTISEMENT

ಎಲ್ಲೆಡೆ ‘ಕಮಲ’ದ ಹೂವು ಹಿಡಿದು ಅಡಗೂರು ಎಚ್‌.ವಿಶ್ವನಾಥ್‌ ಪ್ರಚಾರ!

ಜನರ ಮನಸ್ಸಿನಲ್ಲಿ ಬಿಜೆಪಿ ಚಿಹ್ನೆ ಬಿತ್ತುವ ಪ್ರಯತ್ನ

​ಪ್ರಜಾವಾಣಿ ವಾರ್ತೆ
Published 25 ನವೆಂಬರ್ 2019, 11:16 IST
Last Updated 25 ನವೆಂಬರ್ 2019, 11:16 IST
ವಿಶ್ವನಾಥ್ ಕಮಲದ ಹೂವು ಹಿಡಿದ ಪ್ರಚಾರ ನಡೆಸಿದರು
ವಿಶ್ವನಾಥ್ ಕಮಲದ ಹೂವು ಹಿಡಿದ ಪ್ರಚಾರ ನಡೆಸಿದರು   

ಹುಣಸೂರು: ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಅಡಗೂರು ಎಚ್.ವಿಶ್ವನಾಥ್ ಅವರು ಪ್ರಚಾರದ ಸಂದರ್ಭದಲ್ಲಿ ಕಮಲದ ಹೂವು ಹಿಡಿದೇ ಮತಯಾಚನೆ ಮಾಡುತ್ತಿದ್ದಾರೆ. ಮತದಾರರಿಗೆ ತಮ್ಮ ಪಕ್ಷದ ಚಿಹ್ನೆಯನ್ನು ಮನದಟ್ಟು ಮಾಡುವ ಪ್ರಯತ್ನದಲ್ಲಿ ತೊಡಗಿದ್ದಾರೆ.

ದಶಕಗಳಿಂದ ಕಾಂಗ್ರೆಸ್ ಪಕ್ಷದಲ್ಲಿ ಗುರುತಿಸಿಕೊಂಡಿದ್ದ ವಿಶ್ವನಾಥ್, ಕಳೆದ ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್‌ಗೆ ಸೇರ್ಪಡೆಯಾಗಿದ್ದರು. ತೆನೆ ಹೊತ್ತ ಮಹಿಳೆ ಕೈ ಹಿಡಿದು ಮತದಾರರ ಮನೆ ಬಾಗಿಲಿಗೆ ತೆರಳಿದ್ದರು. ಚುನಾವಣೆಯಲ್ಲಿ ಗೆಲುವೂ ಸಾಧಿಸಿದ್ದರು. ಈಗ ಬಿಜೆಪಿಗೆ ಸೇರ್ಪಡೆಯಾಗಿದ್ದು, ಮತದಾರರಿಗೆ ಚಿಹ್ನೆ ಗೊಂದಲ ಆಗಬಹುದು ಎಂಬ ಕಾರಣದಿಂದ ಕಮಲದ ಚಿಹ್ನೆಯನ್ನು ಮತದಾರರ ಮನಸ್ಸಿನಲ್ಲಿ ಬಿತ್ತಲು ಪ್ರಯತ್ನ ಪಡುತ್ತಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT