ADVERTISEMENT

ದಲಿತರು ಮುಖ್ಯಮಂತ್ರಿಯಾದರೆ ಸಂತೋಷ: ಸಿದ್ದರಾಮಯ್ಯ

​ಪ್ರಜಾವಾಣಿ ವಾರ್ತೆ
Published 9 ನವೆಂಬರ್ 2021, 10:25 IST
Last Updated 9 ನವೆಂಬರ್ 2021, 10:25 IST
   

ಮೈಸೂರು: ರಾಜ್ಯದಲ್ಲಿ ದಲಿತರು ಮುಖ್ಯಮಂತ್ರಿಯಾದರೆ ನನಗೆ ಸಂತಸವೇ ಆಗುತ್ತದೆ. ಯಾವುದೇ ಕಾರಣಕ್ಕೂ ನಾನು ವಿರೋಧಿಸುವುದಿಲ್ಲ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ತಿಳಿಸಿದರು.\

ಇಲ್ಲಿನ ಹಿನಕಲ್ ಗ್ರಾಮದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಕ್ಷೇಮಾಭಿವೃದ್ಧಿ ಸಂಘ ಏರ್ಪಡಿಸಿದ್ದ ಅಂಬೇಡ್ಕರ್ ಸಮುದಾಯ ಭವನ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದರು.

ಬೇರೆ ಬೇರೆ ರಾಜ್ಯಗಳಲ್ಲಿ ದಲಿತರು ಮುಖ್ಯಮಂತ್ರಿ ಆಗಿದ್ದಾರೆ. ಕಾಂಗ್ರೆಸ್ ಪಕ್ಷ ಬಿಟ್ಟರೆ ಬೇರೆ ಪಕ್ಷಗಳಲ್ಲಿ ಈ ಅವಕಾಶ ಇಲ್ಲ. ರಾಜ್ಯದಲ್ಲೂ ಹೈಕಮಾಂಡ್ ದಲಿತರನ್ನೇ ಮುಖ್ಯಮಂತ್ರಿಯಾಗಿ ಪರಿಗಣಿಸಿದರೆ ನಾನು ತುಂಬು ಹೃದಯದಿಂದ ಸ್ವಾಗತಿಸುತ್ತೇನೆ ಎಂದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.