ADVERTISEMENT

ಗಾಯಾಳು ನೆರವಿಗೆ ಧಾವಿಸಿದ ಐಜಿಪಿ

​ಪ್ರಜಾವಾಣಿ ವಾರ್ತೆ
Published 27 ನವೆಂಬರ್ 2020, 4:17 IST
Last Updated 27 ನವೆಂಬರ್ 2020, 4:17 IST

ಮೈಸೂರು: ಇಲ್ಲಿನ ದೊಡ್ಡ ಆಲದಮರದ ಬಳಿ ಗುರುವಾರ ಆಯತಪ್ಪಿ ಬೈಕ್‌ನಿಂದ ಬಿದ್ದು ತೀವ್ರ ರಕ್ತಸ್ರಾವದಿಂದ ಒದ್ದಾಡುತ್ತಿದ್ದ ರಂಗಸ್ವಾಮಿ (53) ಅವರ ನೆರವಿಗೆ ಧಾವಿಸಿದ ದಕ್ಷಿಣ ವಲಯ ಐಜಿಪಿ ವಿಫುಲ್‌ಕುಮಾರ್ ಅವರು ತಮ್ಮ ವಾಹನದಲ್ಲಿ ಆಸ್ಪತ್ರೆಗೆ ದಾಖಲಿಸಿದ್ದಾರೆ.

ವರುಣಾ ಹೋಬಳಿಯ ಆಯರಹಳ್ಳಿ ಗ್ರಾಮದವರಾದ ರಂಗಸ್ವಾಮಿ ಮೈಸೂರಿನಿಂದ ತಮ್ಮ ಗ್ರಾಮಕ್ಕೆ ಹೋಗುವಾಗ ಆಯತಪ್ಪಿ ಬಿದ್ದಿದ್ದಾರೆ. ಈ ಸಂದರ್ಭದಲ್ಲಿ ಸಾರ್ವಜನಿಕರು ಯಾರೂ ನೆರವಿಗೆ ಬರಲಿಲ್ಲ. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರೊಂದಿಗೆ ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡು ಮಲೆ ಮಹದೇಶ್ವರಬೆಟ್ಟದಿಂದ ವಾಪಸ್ ಬರುತ್ತಿದ್ದ ಐಜಿಪಿ ವಿಫುಲ್‌ಕುಮಾರ್ ಗಾಯಾಳುವನ್ನು ಸಮೀಪದ ಕಾವೇರಿ ಆಸ್ಪತ್ರೆಗೆ ದಾಖಲಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT