ಮೈಸೂರು: ಇಲ್ಲಿನ ದೇವನೂರು 3ನೇ ಹಂತದ ಪ್ರಾದೇಶಿಕ ಸಾರಿಗೆ ಅಧಿಕಾರಿಗಳ ಪೂರ್ವ ಕಚೇರಿಯ ಅಕ್ಕಪಕ್ಕ ಅಕ್ರಮವಾಗಿ ನಿರ್ಮಾಣವಾಗಿದ್ದ 50 ಅಂಗಡಿಗಳನ್ನು ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧಿಕಾರಿಗಳು ಶುಕ್ರವಾರ ತೆರವುಗೊಳಿಸಿದರು.
ಇಲ್ಲಿ ಅನಧಿಕೃತವಾಗಿ ವಾಹನ ಚಾಲನಾ ತರಬೇತಿ ಶಾಲೆಗಳು, ಚಹಾದಂಗಡಿಗಳು, ಹೋಟೆಲ್ ನಿರ್ಮಾಣವಾಗಿದ್ದವು.
ಸಾಕಷ್ಟು ಬಾರಿ ಎಚ್ಚರಿಕೆ ನೀಡಿದ್ದರೂ ಮಾಲೀಕರು ತೆರವುಗೊಳಿಸಿರಲಿಲ್ಲ.
ಪೊಲೀಸ್ ಬಿಗಿ ಭದ್ರತೆ ನಡುವೆ ತೆರವು ಕಾರ್ಯಾಚರಣೆ ನಡೆಯಿತು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.