ADVERTISEMENT

ಕೆ.ಆರ್.ಆಸ್ಪತ್ರೆ ಹಾಸಿಗೆ ಹೆಚ್ಚಿಸಲು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಸೂಚನೆ

​ಪ್ರಜಾವಾಣಿ ವಾರ್ತೆ
Published 7 ಅಕ್ಟೋಬರ್ 2020, 1:30 IST
Last Updated 7 ಅಕ್ಟೋಬರ್ 2020, 1:30 IST
ರೋಹಿಣಿ
ರೋಹಿಣಿ   

ಮೈಸೂರು: ಜಿಲ್ಲೆಯಲ್ಲಿ ಕೋವಿಡ್‌–19 ಪ್ರಕರಣಗಳು ಹೆಚ್ಚುತ್ತಿದ್ದು, ಸೋಂಕಿತರ ಚಿಕಿತ್ಸೆಗಾಗಿ ಕೆ.ಆರ್‌.ಆಸ್ಪತ್ರೆಯಲ್ಲಿ ಹೆಚ್ಚಿನ ಹಾಸಿಗೆಗಳ ವ್ಯವಸ್ಥೆ ಮಾಡಿಕೊಳ್ಳುವಂತೆ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಸೂಚಿಸಿದರು.

ಮೈಸೂರು ವೈದ್ಯಕೀಯ ಕಾಲೇಜು ಹಾಗೂ ಆಸ್ಪತ್ರೆಗೆ ಮಂಗಳವಾರ ಭೇಟಿ ನೀಡಿ ಅಧಿಕಾರಿಗಳು, ವೈದ್ಯರು, ನರ್ಸ್‌ಗಳೊಂದಿಗೆ ಚರ್ಚಿಸಿದರು. ಆಕ್ಸಿಜನ್‌ ಸಿಲಿಂಡರ್‌, ವೆಂಟಿಲೇಟರ್‌ ವ್ಯವಸ್ಥೆಯನ್ನು ಪರಿಶೀಲಿಸಿದರು.

ಸದ್ಯ ಕೆ.ಆರ್‌.ಆಸ್ಪತ್ರೆಯಲ್ಲಿ 178 ಹಾಸಿಗೆಗಳು ಇವೆ. ಇವುಗಳನ್ನು ಹೆಚ್ಚಿಗೆ ಮಾಡಬೇಕು. ಟ್ರಾಮಾ ಕೇರ್ ಕೇಂದ್ರದಲ್ಲಿ ಆಕ್ಸಿಜನ್‌ ಹಾಸಿಗೆ ವ್ಯವಸ್ಥೆ ಪ್ರಕ್ರಿಯೆಯನ್ನು ಬೇಗನೇ ಪೂರ್ಣಗೊಳಿಸಿ ಎಂದು ಹೇಳಿದರು.

ADVERTISEMENT

ವೈದ್ಯಕೀಯ ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳಿಗೆ ತರಬೇತಿ ನೀಡಿ ಕೋವಿಡ್‌ ಚಿಕಿತ್ಸೆಗೆ ಬಳಸಿಕೊಳ್ಳಿ ಎಂದು ಸೂಚನೆ ನೀಡಿದರು.

ಮೈಸೂರು ವೈದ್ಯಕೀಯ ಕಾಲೇಜಿನ ನಿರ್ದೇಶಕ ಹಾಗೂ ಡೀನ್‌ ಡಾ.ಸಿ.ಪಿ.ನಂಜರಾಜ್‌, ಕೆ.ಆರ್‌.ಆಸ್ಪತ್ರೆ ಅಧೀಕ್ಷಕ ನಂಜುಂಡಸ್ವಾಮಿ, ಚೆಲುವಾಂಬ ಆಸ್ಪತ್ರೆ ಅಧೀಕ್ಷಕಿ ಡಾ.ಪ್ರಮೀಳಾ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.