ಮೈಸೂರು: ಗೋಹತ್ಯೆ ನಿಷೇಧಕ್ಕಿಂತಲೂ ಅಸ್ಪೃಶ್ಯತೆ ತೊಡೆದು ಹಾಕುವ ಕುರಿತು ರಾಜ್ಯ ಸರ್ಕಾರ ಗಂಭೀರ ಕ್ರಮಗಳನ್ನು ಕೈಗೊಳ್ಳಬೇಕಿತ್ತು ಎಂದು ಸಂಸದ ವಿ.ಶ್ರೀನಿವಾಸಪ್ರಸಾದ್ ಇಲ್ಲಿ ಶುಕ್ರವಾರ ಸುದ್ದಿಗಾರರಿಗೆ ತಿಳಿಸಿದರು.
ಆಹಾರ ಪದ್ಧತಿ ತೀರಾ ವೈಯಕ್ತಿಕವಾದದ್ದು. ಸಸ್ಯಾಹಾರಿಗಳು ಮಾಂಸಾಹಾರಿಗಳಾಗುತ್ತಾರೆ, ಮಾಂಸಾಹಾರಿಗಳು ಸಸ್ಯಾಹಾರಿಗಳಾಗುತ್ತಾರೆ. ಇದಕ್ಕಿಂತಲೂ ಹೆಚ್ಚಾಗಿ ಅಸಮಾನತೆಯನ್ನು ಹೋಗಲಾಡಿಸಲು ಸರ್ಕಾರ ಪ್ರಯತ್ನಿಸಬೇಕು. ಈ ಕುರಿತು ಈ ಹಿಂದೆಯೇ ವಿಧಾನಸಭೆಯಲ್ಲಿ ವಿವರವಾಗಿ ಭಾಷಣ ಮಾಡಿದ್ದೆ ಎಂದು ಹೇಳಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.