ಮೈಸೂರು: ಇಲ್ಲಿನ ಜಿಲ್ಲಾ ಕೇಂದ್ರ ಕಾರಾಗೃಹದ ಮೇಲೆ 175 ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿ ಏಕಕಾಲಕ್ಕೆ ಸೋಮವಾರ ನಡೆಸಿದ ದಿಢೀರ್ ದಾಳಿಯಲ್ಲಿ ಸಿಕ್ಕಿದ್ದು ₹ 1,900. ಲೋಕಸಭಾ ಚುನಾವಣೆಯ ಮುಂಜಾಗ್ರತಾ ಕ್ರಮವಾಗಿ ಪೊಲೀಸ್ ಇಲಾಖೆ ಈ ದಾಳಿ ಕೈಗೊಂಡಿತ್ತು.
ಸುಮಾರು 17 ವಿವಿಧ ತಂಡಗಳಲ್ಲಿ ಪೊಲೀಸರು ದಾಳಿ ನಡೆಸಿದರು. ಪರಿಶೀಲಿಸಲು ಜೈಲು ಅಧಿಕಾರಿಗಳು ಮುಕ್ತ ಅವಕಾಶ ನೀಡಿದರು. ಮಧ್ಯಾಹ್ನ 1 ಗಂಟೆಯಿಂದ 2.30ರವರೆಗೆ ಜೈಲಿನ ಎಲ್ಲ ಬ್ಯಾರಕ್ಗಳನ್ನು ತಪಾಸಣೆ ನಡೆಸಲಾಯಿತು. ಈ ವೇಳೆ ಮೊಬೈಲ್ಗಳು, ಗಾಂಜಾ, ಸಿಗರೇಟು, ಹಣ, ಆಯುಧಗಳು ಸಿಗಬಹುದು ಎಂಬ ಲೆಕ್ಕಾಚಾರ ತಪ್ಪಾಯಿತು.
ಈ ದಾಳಿಯನ್ನು ಲೋಕಸಭಾ ಚುನಾವಣೆಯ ಮುಂಜಾಗ್ರತಾ ಕ್ರಮವಾಗಿ ನಡೆಸಲಾಗಿದೆ. ಮಾದಕವಸ್ತುಗಳು ಹಾಗೂ ಮಾರಕಾಸ್ತ್ರಗಳು ಇಲ್ಲಿ ಸಿಕ್ಕಿಲ್ಲ. ಸದ್ಯ ಸಿಕ್ಕಿರುವ ₹ 1,900 ಹಣದ ಕುರಿತು ತನಿಖೆ ನಡೆಸಲಾಗುವುದು ಎಂದು ನಗರ ಪೊಲೀಸ್ ಕಮಿಷನರ್ ಕೆ.ಟಿ.ಬಾಲಕೃಷ್ಣ ಪ್ರತಿಕ್ರಿಯಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.