ADVERTISEMENT

ಕೊಳೆತ ತ್ಯಾಜ್ಯ ತೆರವಿಗೆ ಆಗ್ರಹ

​ಪ್ರಜಾವಾಣಿ ವಾರ್ತೆ
Published 16 ಏಪ್ರಿಲ್ 2025, 12:42 IST
Last Updated 16 ಏಪ್ರಿಲ್ 2025, 12:42 IST
ಜಯಪುರ ಹೋಬಳಿಯ ವ್ಯಾಪ್ತಿಯ ಕೋಟೆಹುಂಡಿ ಗ್ರಾಮದಲ್ಲಿ ಕೊಳೆತ ತ್ಯಾಜ್ಯ ಸುರಿಯಲಾಗಿದೆ.
ಜಯಪುರ ಹೋಬಳಿಯ ವ್ಯಾಪ್ತಿಯ ಕೋಟೆಹುಂಡಿ ಗ್ರಾಮದಲ್ಲಿ ಕೊಳೆತ ತ್ಯಾಜ್ಯ ಸುರಿಯಲಾಗಿದೆ.   

ಜಯಪುರ:  ಹೋಬಳಿ ವ್ಯಾಪ್ತಿಯ ಕೋಟೆಹುಂಡಿ ಗ್ರಾಮದ ಮುಖ್ಯರಸ್ತೆಯಲ್ಲಿಯೇ ಕೊಳೆತ ತ್ಯಾಜ್ಯದ ರಾಶಿಯನ್ನು ಸುರಿಯುತ್ತಿದ್ದಾರೆ

ಕೊಳೆತ ತ್ಯಾಜ್ಯ ತಿನ್ನಲು ನಾಯಿಗಳು ಮತ್ತು ಹಂದಿಗಳು ಬೀಡು ಬಿಟ್ಟಿದ್ದು, ರಸ್ತೆಯಲ್ಲಿ ಓಡಾಡುವ ಜನರು, ವಾಹನ ಸವಾರರನ್ನು ಕಚ್ಚಲು ಯತ್ನಿಸುತ್ತಿವೆ. ಸಾರ್ವಜನಿಕರಿಗೆ ಕಿರಿಕಿರಿ  ಉಂಟಾಗಿದ್ದು, ಜನರು ಈ ರಸ್ತೆಯಲ್ಲಿ ಓಡಾಡಲು ಭಯಪಡುತ್ತಿದ್ದಾರೆ. ಧನಗಹಳ್ಳಿ ಗ್ರಾಮ ಪಂಚಾಯಿತಿ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಕೂಡಲೇ ಕಸದ ತ್ಯಾಜ್ಯ ತೆರವುಗೊಳಿಸಲು ಕ್ರಮ ಕೈಗೊಳ್ಳಬೇಕು. ಗ್ರಾಮದ ನೈರ್ಮಲ್ಯ ಕಾಪಾಡಬೇಕು.
ಲೋಕೇಶ್, ಕೋಟೆಹುಂಡಿ ಗ್ರಾಮ ನಿವಾಸಿ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.