ADVERTISEMENT

ಮೈಸೂರು: ಬಿಜೆಪಿ ಕಾರ್ಯಕ್ರಮದಲ್ಲಿ ಜೆಡಿಎಸ್ ಶಾಸಕ ಸಾ.ರಾ.ಮಹೇಶ್ ಭಾಗಿ

​ಪ್ರಜಾವಾಣಿ ವಾರ್ತೆ
Published 6 ಅಕ್ಟೋಬರ್ 2021, 13:59 IST
Last Updated 6 ಅಕ್ಟೋಬರ್ 2021, 13:59 IST
‘ಮೋದಿ ಯುಗ್ ಉತ್ಸವ್‌’ ಕಾರ್ಯಕ್ರಮದಲ್ಲಿ ಜೆಡಿಎಸ್ ಶಾಸಕ ಸಾ.ರಾ.ಮಹೇಶ್ ಭಾಗಿಯಾಗಿದ್ದರು.
‘ಮೋದಿ ಯುಗ್ ಉತ್ಸವ್‌’ ಕಾರ್ಯಕ್ರಮದಲ್ಲಿ ಜೆಡಿಎಸ್ ಶಾಸಕ ಸಾ.ರಾ.ಮಹೇಶ್ ಭಾಗಿಯಾಗಿದ್ದರು.    

ಮೈಸೂರು: ಇಲ್ಲಿನ ಕೆ.ಆರ್.ವಿಧಾನಸಭಾ ಕ್ಷೇತ್ರದ ಬಿಜೆಪಿ ಘಟಕವು ವಿದ್ಯಾರಣ್ಯಾಪುರಂ ಉದ್ಯಾನದಲ್ಲಿ ಬುಧವಾರ ಏರ್ಪಡಿಸಿದ್ದ ಮೋದಿ ಯುಗ್ ಉತ್ಸವ್‌ನಲ್ಲಿ ಜೆಡಿಎಸ್ ಶಾಸಕ ಸಾ.ರಾ.ಮಹೇಶ್ ಭಾಗಿಯಾಗಿದ್ದಾರೆ.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೇರಿದಂತೆ ಬಿಜೆಪಿ ನಾಯಕರ ಜತೆ ವೇದಿಕೆ ಹಂಚಿಕೊಂಡಿದ್ದಾರೆ. ಬಿಜೆಪಿ ನಗರ ಘಟಕದ ಅಧ್ಯಕ್ಷ ಶ್ರೀವತ್ಸ ಅವರನ್ನು ಪಕ್ಕಕ್ಕೆ ಸರಿಸಿ ಅವರ ಆಸನದಲ್ಲಿ ಸಾ.ರಾ.ಮಹೇಶ್ ಕುಳಿತರು.

ಸಚಿವರಾದ ಎಸ್.ಟಿ.ಸೋಮಶೇಖರ್, ಭೈರತಿ ಬಸವರಾಜು ಅವರೊಂದಿಗೆ ಕುಳಿತ ಸಾ.ರಾ.ಮಹೇಶ್ ಅವರು ಕೇಸರಿ ಶಾಲನ್ನು ಬಿಜೆಪಿ ಕಾರ್ಯಕರ್ತರಂತೆ ತನ್ನ ಹೆಗಲಿಗೆ ಹಾಕಿಕೊಳ್ಳುವ ಮೂಲಕ ಕಾರ್ಯಕರ್ತರಲ್ಲಿ ಅಚ್ಚರಿ ಮೂಡಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT