ADVERTISEMENT

ಜೆಎನ್‌ಯು ಕನ್ನಡ ಭಾಷಾ ವಿಭಾಗದ ಮುಖ್ಯಸ್ಥರಾಗಿ ಡಾ.ವಿಶ್ವನಾಥ್ ನೇಮಕ

​ಪ್ರಜಾವಾಣಿ ವಾರ್ತೆ
Published 21 ಆಗಸ್ಟ್ 2020, 20:23 IST
Last Updated 21 ಆಗಸ್ಟ್ 2020, 20:23 IST
ಡಾ.ವಿಶ್ವನಾಥ್
ಡಾ.ವಿಶ್ವನಾಥ್   

ಮೈಸೂರು: ನವದೆಹಲಿಯ ಪ್ರತಿಷ್ಠಿತ ಜವಹರಲಾಲ್‌ ನೆಹರೂ ವಿಶ್ವವಿದ್ಯಾಲಯದ, ‘ಭಾರತೀಯ ಭಾಷಾ ಕೇಂದ್ರ ಮತ್ತು ಸಾಹಿತ್ಯ ಮತ್ತು ಸಂಸ್ಕೃತಿ ಅಧ್ಯಯನ’ ಕೇಂದ್ರದ (ಎಸ್‌ಎಲ್‌ಎಲ್‌ ಅಂಡ್‌ ಸಿಎಸ್‌) ಕನ್ನಡ ಭಾಷಾ ವಿಭಾಗದ ಪ್ರಾಧ್ಯಾಪಕ ಹಾಗೂ ಮುಖ್ಯಸ್ಥರಾಗಿ ಡಾ.ವಿಶ್ವನಾಥ್ ನೇಮಕಗೊಂಡಿದ್ದಾರೆ.

ಹಾಸನ ಜಿಲ್ಲೆಯ ಸಕಲೇಶಪುರ ತಾಲ್ಲೂಕಿನ ಹೊಳಗಳರಹಳ್ಳಿ ಗ್ರಾಮದವರಾದ ವಿಶ್ವನಾಥ್, ಮೈಸೂರಿನ ಮಹಾರಾಜ ಪದವಿ ಕಾಲೇಜಿನಲ್ಲಿ ಕನ್ನಡ ವಿಭಾಗದ ಮುಖ್ಯಸ್ಥರಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ.

27 ವರ್ಷದ ಬೋಧನಾ ಅನುಭವ ಹೊಂದಿದ್ದು, 14 ಪಿಎಚ್‌.ಡಿ ಅಭ್ಯರ್ಥಿಗಳಿಗೆ ಮಾರ್ಗದರ್ಶನ ನೀಡಿದ್ದಾರೆ.

ADVERTISEMENT

ಈ ಹಿಂದೆ ಮುಖ್ಯಸ್ಥರಾಗಿದ್ದ ಡಾ.ಪುರುಷೋತ್ತಮ ಬಿಳಿಮಲೆ ಅವರ ಅವಧಿ ಆ.20ಕ್ಕೆ ಪೂರ್ಣಗೊಂಡಿದೆ. 36 ಜನರು ಮುಖ್ಯಸ್ಥರ ಹುದ್ದೆಗಾಗಿ ಸಂದರ್ಶನದಲ್ಲಿ ಭಾಗಿಯಾಗಿದ್ದರು ಎಂಬುದು ತಿಳಿದು ಬಂದಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.