ADVERTISEMENT

ಕುರುಬ ಸಮುದಾಯ ಎಸ್‌.ಟಿಗೆ ಸೇರಲಿ– ಶಿವಾನಂದಪುರಿ ಸ್ವಾಮೀಜಿ

​ಪ್ರಜಾವಾಣಿ ವಾರ್ತೆ
Published 3 ಡಿಸೆಂಬರ್ 2020, 14:53 IST
Last Updated 3 ಡಿಸೆಂಬರ್ 2020, 14:53 IST

ಮೈಸೂರು: ಕುರುಬ ಸಮುದಾಯ ಪರಿಶಿಷ್ಟ ಪಂಗಡ (ಎಸ್‌.ಟಿ)ದ ಪಟ್ಟಿಗೆ ಸೇರಿದರೆ ಶತಮಾನಗಳಿಂದ ಹಿಂದುಳಿದಿರುವ ಸಮಾಜ ಮುಂದೆ ಬರಬಹುದು ಎಂಬ ಭಾವನೆ ಎಲ್ಲರಲ್ಲಿದೆ ಎಂದು ಕಾಗಿನಲೆ ಶಾಖಾಮಠದ ಕನಕ ಗುರುಪೀಠದ ಶಿವಾನಂದಪುರಿ ಸ್ವಾಮೀಜಿ ಹೇಳಿದರು.

ಸಂತ ಶ್ರೀ ಕನಕದಾಸರ ಜಯಂತ್ಯುತ್ಸವ ಸಮಿತಿ ನೇತೃತ್ವದಲ್ಲಿ ಕನಕ ಗುರುಪೀಠದಲ್ಲಿ ಗುರುವಾರ ನಡೆದ ಕನಕದಾಸ ಅವರ ಜಯಂತಿ ಮಹೋತ್ಸವದಲ್ಲಿ ಅವರು ಮಾತನಾಡಿದರು.

ಪರಿಶಿಷ್ಟ ಪಂಗಡಕ್ಕೆ ಸೇರಿಸುವುದರಲ್ಲಿ ಎಷ್ಟು ರಾಜಕೀಯ ಇದೆಯೋ, ಮೋಸ ಇದೆಯೋ ಗೊತ್ತಿಲ್ಲ. ಆದರೆ, ಶ್ರೀಮಠ ಈ ವಿಚಾರ ಕುರಿತು ಸೂಕ್ತವಾದ ನಿರ್ಧಾರ ಕೈಗೊಂಡಿದೆ ಎಂದು ಅವರು ತಿಳಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.