ADVERTISEMENT

ರಂಗಭೂಮಿಯಿಂದ ಮನೋವಿಕಾಸ: ಡಾ.ಲತಾ ರಾಜಶೇಖರ್‌

‘ಜೆಎಸ್ಎಸ್ ರಂಗೋತ್ಸವ–2022’ ಸಮಾರೋಪ

​ಪ್ರಜಾವಾಣಿ ವಾರ್ತೆ
Published 24 ನವೆಂಬರ್ 2022, 11:37 IST
Last Updated 24 ನವೆಂಬರ್ 2022, 11:37 IST
ಮೈಸೂರಿನಲ್ಲಿ ಗುರುವಾರ ನಡೆದ ‘ಜೆಎಸ್ಎಸ್ ರಂಗೋತ್ಸವ–2022’ ಸಮಾರೋಪ ಸಮಾರಂಭದಲ್ಲಿ ಜೀವನ್ ಕುಮಾರ್ ನಿರ್ದೇಶನದ ‘ಚಾಮಚೆಲುವೆ’ ನಾಟಕವನ್ನು ಜೆಎಸ್ಎಸ್ ಮಹಿಳಾ ಕಾಲೇಜು ತಂಡದವರು ಪ್ರದರ್ಶಿಸಿದರು/ ಪ್ರಜಾವಾಣಿ ಚಿತ್ರ
ಮೈಸೂರಿನಲ್ಲಿ ಗುರುವಾರ ನಡೆದ ‘ಜೆಎಸ್ಎಸ್ ರಂಗೋತ್ಸವ–2022’ ಸಮಾರೋಪ ಸಮಾರಂಭದಲ್ಲಿ ಜೀವನ್ ಕುಮಾರ್ ನಿರ್ದೇಶನದ ‘ಚಾಮಚೆಲುವೆ’ ನಾಟಕವನ್ನು ಜೆಎಸ್ಎಸ್ ಮಹಿಳಾ ಕಾಲೇಜು ತಂಡದವರು ಪ್ರದರ್ಶಿಸಿದರು/ ಪ್ರಜಾವಾಣಿ ಚಿತ್ರ   

ಮೈಸೂರು: ‘ರಂಗ ಚಟುವಟಿಕೆಗಳು ಮನರಂಜನೆಯ ಜೊತೆಗೆ ಮನೋವಿಕಾಸಕ್ಕೂ ಸಹಕಾರಿಯಾಗಿವೆ’ ಎಂದು ಸಾಹಿತಿ ಡಾ.ಲತಾ ರಾಜಶೇಖರ್‌ ಹೇಳಿದರು.

ಇಲ್ಲಿನ ಸರಸ್ವತಿಪುರಂನ ಜೆಎಸ್‌ಎಸ್‌ ಮಹಿಳಾ ಕಾಲೇಜಿನ ನವಜ್ಯೋತಿ ಸಭಾಂಗಣದಲ್ಲಿ ಗುರುವಾರ ಆಯೋಜಿಸಿದ್ದ ‘ಜೆಎಸ್ಎಸ್ ರಂಗೋತ್ಸವ–2022’ ಸಮಾರೋಪ ಸಮಾರಂಭದಲ್ಲಿ ಅವರು ಮಾತನಾಡಿದರು.

‘ಸಮೂಹ ಮಾಧ್ಯಮಗಳು ಮಕ್ಕಳ ಮೇಲೆ ಬಹಳ ವೇಗವಾಗಿ ಪ್ರಭಾವ ಬೀರುತ್ತವೆ. ನಾಟಕ, ನೃತ್ಯ, ಸಂಗೀತಗಳು ಮಕ್ಕಳಲ್ಲಿ ಸಕಾರಾತ್ಮಕ ಚಿಂತನೆಗಳನ್ನು ಬೆಳೆಸುತ್ತವೆ. ಅವರಲ್ಲಿ ವೈಚಾರಿಕ ಶಕ್ತಿ ಜಾಗೃತಗೊಳಿಸುತ್ತವೆ’ ಎಂದರು.

ADVERTISEMENT

ರಂಗಕರ್ಮಿ ಡಾ.ಸುಜಾತಾ ಅಕ್ಕಿ ಮಾತನಾಡಿ, ‘ಮೈಸೂರು ಸೀಮೆಯು ಕನ್ನಡ ಸಂಸ್ಕೃತಿ, ಕಲೆ, ಪರಂಪರೆಗಳಿಗೆ ವಿಶಿಷ್ಟವಾದ ನೆಲೆಯನ್ನು ಹೊಂದಿದೆ. ಉತ್ತರದಿಂದ ಬಂದ ಮಹದೇಶ್ವರರು, ಮಂಟೇಸ್ವಾಮಿ, ಸಿದ್ದಪ್ಪಾಜಿ, ರಾಚಪ್ಪಾಜಿ ಕತ್ತಲೆಯ ರಾಜ್ಯದಲ್ಲಿ ಜ್ಞಾನದ ಬೆಳಕನ್ನು ಪಸರಿಸಿದರು’ ಎಂದು ಸ್ಮರಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.