ADVERTISEMENT

ನಾಡು–ನುಡಿ ಉಳಿಸಬೇಕು: ಜಿಟಿಡಿ

​ಪ್ರಜಾವಾಣಿ ವಾರ್ತೆ
Published 21 ನವೆಂಬರ್ 2022, 14:24 IST
Last Updated 21 ನವೆಂಬರ್ 2022, 14:24 IST
ಮೈಸೂರಿನ ಕೆ.ಎಸ್.ಎಫ್.ಸಿ. ಬಡಾವಣೆಯಲ್ಲಿ ಏರ್ಪಡಿಸಿದ್ದ ರಾಜ್ಯೋತ್ಸವವನ್ನು ಶಾಸಕ ಜಿ.ಟಿ.ದೇವೇಗೌಡ ಉದ್ಘಾಟಿಸಿದರು
ಮೈಸೂರಿನ ಕೆ.ಎಸ್.ಎಫ್.ಸಿ. ಬಡಾವಣೆಯಲ್ಲಿ ಏರ್ಪಡಿಸಿದ್ದ ರಾಜ್ಯೋತ್ಸವವನ್ನು ಶಾಸಕ ಜಿ.ಟಿ.ದೇವೇಗೌಡ ಉದ್ಘಾಟಿಸಿದರು   

ಮೈಸೂರು: ‘ನಾಡು, ನುಡಿ, ಕಲೆ ಹಾಗೂ ಸಂಸ್ಕೃತಿಯನ್ನು ಮುಂದಿನ ಪೀಳಿಗೆಗೆ ಉಳಿಸುವ ಜವಾಬ್ದಾರಿ ನಮ್ಮೆಲ್ಲರದಾಗಿದೆ’ ಎಂದು ಶಾಸಕ ಜಿ.ಟಿ.ದೇವೇಗೌಡ ತಿಳಿಸಿದರು.

ನಗರದ ದೇವೇಗೌಡ ವೃತ್ತದ ಸಮೀಪದ ಕೆ.ಎಸ್.ಎಫ್.ಸಿ. ಬಡಾವಣೆಯಲ್ಲಿ ಏರ್ಪಡಿಸಿದ್ದ 67ನೇ ಕನ್ನಡ ರಾಜ್ಯೋತ್ಸವ ಹಾಗೂ ಯೋಗ ಮಂಟಪ ಉದ್ಘಾಟನೆಯನ್ನು ನೆರವೇರಿಸಿ ಅವರು ಮಾತನಾಡಿದರು.

‘ಸಮೃದ್ಧ ಇತಿಹಾಸ ಹೊಂದಿರುವ ಶ್ರೀಮಂತ ಭಾಷೆ ನಮ್ಮ ಕನ್ನಡ. ವಿಶ್ವದ ಅತ್ಯಂತ ಪ್ರಾಚೀನ ಭಾಷೆಗಳಲ್ಲಿ ಪ್ರಮುಖವಾಗಿದೆ’ ಎಂದರು.

ADVERTISEMENT

ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕ ಕೆ.ಎಂ.ಸುರೇಶ್ ಕುಮಾರ್, ಎಂ.ಕಾಂತರಾಜು, ರಮೇಶ್ ಹಂಚ್ಯಾ, ಕೆ.ಎಸ್.ಎಫ್.ಸಿ. ನಿವಾಸಿಗಳ ಸಂಘದ ಅಧ್ಯಕ್ಷ ಅರುಣ್, ಉಪಾಧ್ಯಕ್ಷ ಮಹೇಂದ್ರ ಡಿ., ಕಾರ್ಯದರ್ಶಿ ಅನಿಲ್ ಕುಮಾರ್, ಖಜಾಂಚಿ ಪ್ರಶಾಂತ್, ನಿರ್ದೇಶಕರಾದ ಸಾವಿತ್ರಮ್ಮ, ರಾಜು, ವೆಂಕಟೇಶ್, ವಿಕಾಶ್ ಕುಮಾರ್, ರವಿ, ನಾಗರಾಜು, ಜೆ.ಜಯರಾಮು, ಮುಖಂಡ ರಾಮು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.