ADVERTISEMENT

ಮೈಸೂರು | ಕಾಂಗ್ರೆಸ್ ಉಸ್ತುವಾರಿ ಜೊತೆ ಎಚ್‌. ವಿಶ್ವನಾಥ್ ಮಾತುಕತೆ

​ಪ್ರಜಾವಾಣಿ ವಾರ್ತೆ
Published 27 ಜನವರಿ 2023, 6:47 IST
Last Updated 27 ಜನವರಿ 2023, 6:47 IST
   

ಮೈಸೂರು: ಕಾಂಗ್ರೆಸ್‌ ಸೇರುವುದಾಗಿ ಈಗಾಗಲೇ ಪ್ರಕಟಿಸಿರುವ ಬಿಜೆಪಿಯ ವಿಧಾನಪರಿಷತ್‌ ಸದಸ್ಯ ಎ.ಎಚ್.ವಿಶ್ವನಾಥ್ ಎಐಸಿಸಿ ಪ್ರಧಾನ ಕಾರ್ಯದರ್ಶಿಯೂ ಆಗಿರುವ ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ರಣದೀಪ್‌ಸಿಂಗ್‌ ಸುರ್ಜೇವಾಲ ಅವರೊಂದಿಗೆ ಶುಕ್ರವಾರ ಮಾತುಕತೆ ನಡೆಸಿದ್ದಾರೆ.

‘ಪ್ರಜಾಧ್ವನಿ’ ಸಮಾವೇಶಕ್ಕಾಗಿ ಬಂದು ಇಲ್ಲಿನ ಹೋಟೆಲ್‌ನಲ್ಲಿ ತಂಗಿದ್ದ ಸುರ್ಜೇವಾಲಾ ಜೊತೆ ಚರ್ಚಿಸಿದ್ದಾರೆ. ಈ ವೇಳೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಇದ್ದರು. ‍ಪಕ್ಷ ಸೇರ್ಪಡೆ ಬಗ್ಗೆ ಮಾತುಕತೆ ನಡೆಸಿದ್ದಾರೆ ಎಂದು ಹೇಳಲಾಗುತ್ತಿದೆ.

ವಿಶ್ವನಾಥ್ ಜ.28ರಂದು ಪತ್ರಿಕಾಗೋಷ್ಠಿ ಕರೆದಿದ್ದು ಹೆಚ್ಚಿನ ವಿವರ ನೀಡುವ ನಿರೀಕ್ಷೆ ಇದೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.