ADVERTISEMENT

ಹುಲಿ ಕಂಡು ಸಂತಸಪಟ್ಟ ಹೈಕೋರ್ಟ್‌ ಮುಖ್ಯ ನ್ಯಾಯಮೂರ್ತಿ ಋತುರಾಜ್ ಅವಸ್ಥಿ

​ಪ್ರಜಾವಾಣಿ ವಾರ್ತೆ
Published 19 ಮಾರ್ಚ್ 2022, 2:59 IST
Last Updated 19 ಮಾರ್ಚ್ 2022, 2:59 IST
ಋತುರಾಜ್ ಅವಸ್ಥಿ
ಋತುರಾಜ್ ಅವಸ್ಥಿ   

ಎಚ್.ಡಿ.ಕೋಟೆ: ತಾಲ್ಲೂಕಿನ ಕಾರಾಪುರದಲ್ಲಿರುವ ಜಂಗಲ್ ಲಾಡ್ಜ್ ಮತ್ತು ರೆಸಾರ್ಟ್‌ನಲ್ಲಿ ಹೈಕೋರ್ಟ್‌ ಮುಖ್ಯ ನ್ಯಾಯಮೂರ್ತಿ ಋತುರಾಜ್ ಅವಸ್ಥಿ ಅವರು ತಮ್ಮ ಕುಟುಂಬದ ಸದಸ್ಯರೊಂದಿಗೆ ವಾಸ್ತವ್ಯ ಹೂಡಿದ್ದಾರೆ.

ನಾಗರಹೊಳೆ ರಾಷ್ಟ್ರೀಯ ಉದ್ಯಾನವನದ ಅಂತರಸಂತೆ ವನ್ಯಜೀವಿ ವಲಯದಲ್ಲಿ ಶುಕ್ರವಾರ ಸಫಾರಿ ನಡೆಸಿದ ವೇಳೆ ಹುಲಿ ಕಾಣಿಸಿದ್ದು, ಎಲ್ಲರೂ ಸಂತಸಪಟ್ಟರು ಎಂದು ಮೂಲಗಳು ತಿಳಿಸಿವೆ.

ಶನಿವಾರವೂ ರೆಸಾರ್ಟ್‌ನಲ್ಲೇ ವಾಸ್ತವ್ಯ ಹೂಡಲಿದ್ದು, ಪೊಲೀಸ್ ಭದ್ರತೆ ಕಲ್ಪಿಸಲಾಗಿದೆ. ಸ್ಥಳದಲ್ಲಿ ತಹಶೀಲ್ದಾರ್ ರತ್ನಾಂಬಿಕೆ ಮೊಕ್ಕಾಂ ಹೂಡಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.